Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ತೆಲಂಗಾಣದಲ್ಲಿ ನಕ್ಸಲ್ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದ ಸೇನೆ

ಹೈದರಾಬಾದ್: ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ.

ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸಗಡಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಗೆ ಸೇರಿದ ಇಬ್ಬರು ನಕ್ಸಲರು ಹತ್ಯೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತೆಲಂಗಾಣ-ಛತ್ತೀಸ್‌ಗಢ ಗಡಿಯಲ್ಲಿರುವ ಮಂಡಲದ ಪುಟ್ಟಪಾಡು ಅರಣ್ಯದಲ್ಲಿ ಗ್ರೇಹೌಂಡ್ಸ್ ಪಡೆಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರು ಉಪಸ್ಥಿತಿ ಕಂಡ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ನಕ್ಸಲರು ಹತರಾಗಿದ್ದಾರೆ.

No Comments

Leave A Comment