ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

92ನೇ ವಯಸ್ಸಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಭಾರತದ ಅತಿ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ: 27 ಸಾವಿರ ಮತಗಳ ಅಂತರದಲ್ಲಿ ಭರ್ಜರಿ ಗೆಲುವು!

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತೊಮ್ಮೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಭಾರತ ದೇಶದ ಅತಿ ಹಿರಿಯ ಶಾಸಕ ಎನಿಸಿಕೊಂಡಿದ್ದಾರೆ. ಅವರು ಈ ಬಾರಿ  ಒಟ್ಟು 84,258 ಮತಗಳನ್ನು ಪಡೆದಿದ್ದಾರೆ. ಎದುರಾಳಿ ಅಭ್ಯರ್ಥಿ ಬಿಜೆಪಿಯ ಬಿ ಜಿ ಅಜಯಕುಮಾರ್ 56,410 ಮತಗಳನ್ನು ಪಡೆದಿದ್ದು 27,888 ಮತಗಳ ಅಂತರದಿಂದ ಶಾಮನೂರು ಶಿವಶಂಕರಪ್ಪ ಸೋಲಿಸಿದ್ದಾರೆ.

ಕಾಂಗ್ರೆಸ್‌ನ ಭದ್ರಕೋಟೆ ಆಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಶಾಮನೂರು ಶಿವಶಂಕರಪ್ಪ ಅವರ ಗೆಲುವು ಕಠಿಣವಿದೆ ಎಂದೇ ಅಂದಾಜಿಸಲಾಗಿತ್ತು. ಆದರೂ, ಅವರು ಬರೋಬ್ಬರಿ 27,888 ಮತಗಳ ಅಂತರದಿಂದ ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ 92 ವರ್ಷ ವಯಸ್ಸಿನಲ್ಲೂ ರಾಜಕೀಯ ಹುರುಪು ಉಳಿಸಿಕೊಂಡಿದ್ದಾರೆ.

ಇಲ್ಲಿ ಜೆಡಿಎಸ್ ಅಭ್ಯರ್ಥಿ ಅಮಾನುಲ್ಲಾ ಖಾನ್ 1,296 ಮತಗಳನ್ನು ಗಳಿಸಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ ಒಟ್ಟು 2,10,668 ಮತದಾರರಿದ್ದು, ಅವರಲ್ಲಿ 1,45,534 ಮತದಾನವಾಗಿತ್ತು.

kiniudupi@rediffmail.com

No Comments

Leave A Comment