ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಟ್ರಕ್ ಟ್ರೇಲರ್ ಮತ್ತು ವ್ಯಾನ್ ನಡುವೆ ಅಪಘಾತ – 26 ಮಂದಿ ಸಾವು
ಮೆಕ್ಸಿಕೋ:ಮೇ15.ಉತ್ತರ ಮೆಕ್ಸಿಕನ್ ರಾಜ್ಯವಾದ ತಮೌಲಿಪಾಸ್ನಲ್ಲಿ ಟ್ರಕ್ ಟ್ರೇಲರ್ ಮತ್ತು ವ್ಯಾನ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 26 ಮಂದಿ ಸಾವನ್ನಪ್ಪಿದ್ದಾರೆ.
ಖಾಸಗಿ ಸಾರಿಗೆ ಸಂಸ್ಥೆಗೆ ಸೇರಿದ ವ್ಯಾನ್ ನಲ್ಲಿ ಮಕ್ಕಳನ್ನು ಹಾಗೂ ಪ್ರಯಾಣಿಕರನ್ನು ಕೊಂಡ್ಯೊಯುವ ವೇಳೆಗೆ ಅಪಘಾತ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ಮಂದಿ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಟ್ರಕ್ ಚಾಲಕ ಕೂಡ ಸಾವನ್ನಪ್ಪಿದ್ದಾನೆಯೇ ಅಥವಾ ಅವನು ಪರಾರಿಯಾಗಿದ್ದಾನೆಯೇ ಎಂಬುದು ಖಚಿತವಾಗಿಲ್ಲ.