ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ವಿಧಾನಸಭೆ ನೂತನ ಸ್ಪೀಕರ್ ಆಗಿ ಸರ್ವಾನುಮತದಿಂದ ಯುಟಿ ಖಾದರ್ ಆಯ್ಕೆ
ಬೆಂಗಳೂರು: ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವರು ಸರ್ವಾನುಮತದಿಂದ ಬುಧವಾರ ಆಯ್ಕೆಯಾಗಿದ್ದಾರೆ.
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು.
ಮುಖ್ಯಮಂಚ್ಕಿದಶ ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುಮೋದಿಸಿದರು. ಇದರಂತೆ ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್ ಅವರು ಸರ್ವಾನುಮತದಿಂದ ಆಯ್ಕೆಗೊಂಡರು.
ನೂತನ ಸ್ಪೀಕರ್’ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ:-
ನೂತನ ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್ಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಅಭಿನಂದನೆ ಸಲ್ಲಿಸಿದರು.
ಸ್ಪೀಕರ್ ಯು.ಟಿ.ಖಾದರ್ಗೆ ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸದನವೀರ ಪ್ರಶಸ್ತಿಯೂ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್ ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದುದು. ರಾಜ್ಯದ ಜಿಡಿಪಿ ಬೆಳವಣಿಗೆ ಕೂಡ ಆಗಬೇಕು ಎಂದು ಹೇಳಿದರು.
ಬಳಿಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಅಭಿನಂದನೆ ಸಲ್ಲಿಸಿದರು. ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು. ಯು.ಟಿ.ಖಾದರ್ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ. ಈ ಹಿಂದೆ ಸ್ಪೀಕರ್ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್ ಸ್ಥಾನ. ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು. ವಿಪಕ್ಷ ಸದಸ್ಯರ ಹೇಳಿಕೆಗೆ ಸ್ಪೀಕರ್ ಹೆಚ್ಚು ಅವಕಾಶ ಕೊಡಬೇಕು. ಚರ್ಚೆ ವೇಳೆ ಕೊನೆಯ ಸಾಲಿನವರಿಗೆ ಹೆಚ್ಚು ಅವಕಾಶ ಕೊಡಬೇಕು. ಸ್ಪೀಕರ್ ಹೊಸ ವಿಚಾರಕ್ಕೆ ಅವಕಾಶ ಮಾಡಿಕೊಡುವ ವಿಶ್ವಾಸವಿದೆ. ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಿಂದ ಸಭಾಧ್ಯಕ್ಷರಾದ ಎರಡನೇ ಜನಪ್ರತಿನಿಧಿ ಖಾದರ್ ಆಗಿದ್ದಾರೆ. ಇದರಂತೆ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದಿಂದ ಈ ಹುದ್ದೆಗೆ ಏರಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಹಿಂದೆ ಬೆಳ್ತಂಗಡಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿ. ವೈಕುಂಠ ಬಾಳಿಗಾ ಎರಡು ಬಾರಿ (1962, 1967) ಸಭಾಧ್ಯಕ್ಷರಾಗಿದ್ದರು.