Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕುಖ್ಯಾತ ದರೋಡೆ ಗ್ಯಾಂಗ್ ಪೋಲಿಸ್​ ಬಲೆಗೆ; ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕುವ ವೇಳೆ ಅರೆಸ್ಟ್

ಬೆಂಗಳೂರು ಗ್ರಾಮಾಂತರ: ಕುಖ್ಯಾತ ದರೋಡೆ ಗ್ಯಾಂಗ್​ನ್ನ ಸೂರ್ಯನಗರ ಪೊಲೀಸರು(Police) ಇದೀಗ ಬಂಧಿಸಿದ್ದಾರೆ. ಸುನೀಲ್ ಹಾವೇರಿ(26), ಸರವಣ ಅಲಿಯಾಸ್ ಚಿಟ್ಟಿ(32), ಕಾಂತರಾಜ(27 ) ಬಂಧಿತರು. ಸೂರ್ಯನಗರ ಪೇಸ್‌-2 ಹಿನ್ನಕ್ಕಿ ಬಳಿ ಮಾರಕಾಸ್ತ್ರಗಳೊಂದಿಗೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ವೇಳೆ ಬಂಧಿಸಲಾಗಿದೆ.

ಹೌದು ಈ ಖತರ್ನಾಕ್​ ಗ್ಯಾಂಗ್​ ಒಬ್ಬಂಟಿಯಾಗಿ ಸಾಗುವವರನ್ನು ಟಾರ್ಗೆಟ್ ಮಾಡುತ್ತಿತ್ತು. ಅವರನ್ನ ಮಾರಕಾಸ್ತ್ರಗಳಿಂದ ಬೆದರಿಸಿ ಮೊಬೈಲ್, ನಗದು, ಚಿನ್ನಾಭರಣ ದೋಚುತ್ತಿದ್ದರು. ಇದೀಗ ಪೊಲೀಸ್​ ಅತಿಥಿಯಾಗಿದ್ದಾರೆ. ಈ ಕುರಿತು ಸೂರ್ಯನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್ ಮಾಡಲಾಗಿದೆ.

ಇನ್ನು ಆರೋಪಿ ಸುನೀಲ್ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಕೇಸ್ ಆರೋಪಿಯಾಗಿದ್ದ. ಅತ್ತಿಬೆಲೆ, ನಗರದ ಜೀವನ್ ಭೀಮಾ ನಗರ ಠಾಣಾ ವ್ಯಾಪ್ತಿಯಲ್ಲೂ ಕೊಲೆ ಯತ್ನ, ಡಕಾಯಿತಿ ಸೇರಿದಂತೆ ಹಲವು ಪ್ರಕರಣಗಳು ಇತನ ಮೇಲೆ ಇದೆ. ಇನ್ನೊಬ್ಬ ಆರೋಪಿ ಸರವಣ ಮೇಲೆ ಕೂಡ ತಮಿಳುನಾಡಿನ ಹೊಸೂರಿನ ಹುಡ್ಕೊ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಕೇಸ್‌ ದಾಖಲಾಗಿದೆ. ಮತ್ತು ಮತ್ತೊರ್ವ ಆರೋಪಿ ಕಾಂತರಾಜ್ ಡಕಾಯಿತಿ, ರಾಬರಿ ಸೇರಿದಂತೆ ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಇದೀಗ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಅಸಾಮಿಗಳನ್ನ ಸೂರ್ಯನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

No Comments

Leave A Comment