ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ವಿದೇಶದಲ್ಲಿ ನೆಲೆಸಿರುವ ಭಾರತೀಯರಿಗೆ ₹2,000 ನೋಟುಗಳ ಬದಲಾವಣೆ ಸಂಕಷ್ಟ!

ದುಬೈ:ಮೇ 30. 2,000 ರೂ.ನೋಟುಗಳ ಚಲಾವಣೆಯ ಸ್ಥಗಿತಗೊಳಿಸಲು ಇನ್ನೂ ಕೆಲವೇ ತಿಂಗಳುಗಳಿವೆ. ಅದರಲ್ಲಿಯೂ 2000 ರೂ. ನೋಟು ಚಲಾವಣೆ ಸ್ಥಗಿತಗೊಳಿಸಿ, ವಾಪಸ್ ಪಡೆಯಲು ಬ್ಯಾಂಕ್‌ಗಳಿಗೆ ಆರ್‌ಬಿಐ ಆದೇಶ ನೀಡಿದ್ದು, ಇದರಿಂದ ವಿದೇಶದಲ್ಲಿ ನೆಲೆಸಿರುವ ಭಾರತೀಯರು ಪರದಾಡಿದ್ದಾರೆ.

2,000ರೂ. ನೋಟುಗಳ ಚಲಾವಣೆಯ ಸ್ಥಗಿತದಿಂದ ಭಾರತ ಬಿಟ್ಟು ಬೇರೆ ದೇಶಕ್ಕೆ ಉದ್ಯೋಗಕ್ಕಾಗಿ ಹೋದವರು ಹಾಗೂ ಪ್ರವಾಸಕ್ಕೆ ಹೋದವರು ಪರದಾಡಿದ್ದಾರೆ. ಇದೀಗ ಭಾರತದಿಂದ ಸಾಕಷ್ಟು ಜನ ವಿವಿಧ ಕಾರಣಗಳಿಗೆ ಬೇರೆ ಬೇರೆ ರಾಷ್ಟ್ರಗಳಿಗೆ ತೆರಳುತ್ತಾರೆ. ಆದರೆ ಹೀಗೆ ತೆರಳಿದ ಭಾರತೀಯರಿಗೆ 2,000ರೂ. ನೋಟುಗಳನ್ನ ವಿನಿಮಯ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಭಾರತ ಸರ್ಕಾರವು 2,000ರೂ. ನೋಟುಗಳ ಬದಲಾವಣೆಗೆ ಅನುಸರಿಸುತ್ತಿರುವ ನಿಯಮದ ಬಗ್ಗೆ ಗಲ್ಫ್ ರಾಷ್ಟ್ರಗಳ ಬ್ಯಾಂಕ್‌ಗಳಿಗೆ ಯಾವುದೇ ಮಾಹಿತಿ ಇಲ್ಲ. ಯಾವುದೇ ದೇಶ ಬಿಟ್ಟು ಬೇರೆ ದೇಶಕ್ಕೆ ಹೋದವರು ತಮ್ಮ ಬಳಿ ಇರುವ 2,000ರೂ. ನೋಟನ್ನ ವಿನಿಮಯ ಮಾಡಿಕೊಳ್ಳಲು ಆಗುತ್ತಿಲ್ಲ ಎಂದು ಪರದಾಡುತ್ತಿದ್ದಾರೆ

ಮೇ 19 ರಂದು ಭಾರತೀಯ ರಿಸರ್ವ್ ಬ್ಯಾಂಕ್ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವುದಾಗಿ ತಿಳಿಸಿದ್ದು. ಈ ನೋಟುಗಳನ್ನು ಸೆಪ್ಟೆಂಬರ್ 30ರೊಳಗೆ ಬ್ಯಾಂಕ್‌ಗಳಿಗೆ ಜಮೆ ಅಥವಾ ವಿನಿಮಯ ಮಾಡಿಕೊಳ್ಳಬೇಕು. ಜೊತೆಗೆ, ಈ ನೋಟುಗಳನ್ನು ಗ್ರಾಹಕರಿಗೆ ನೀಡಬಾರದು ಎಂದು ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ.

ಈ ‘ಸೌದಿ ಅರೇಬಿಯಾದ ನೋಟು ವಿನಿಮಯ ಕೇಂದ್ರದಲ್ಲಿ ಭಾರತದ ಎರಡು ಸಾವಿರ ಮುಖಬೆಲೆಯ ನೋಟು ಸ್ವೀಕರಿಸುವುದನ್ನು ಸ್ಥಗಿತಗೊಳಿಸಲಾಗಿದೆ’ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘ನಾವು ಈಗ ರಜಾ ಅವಧಿಯ ಮಧ್ಯದಲ್ಲಿದ್ದೇವೆ. ಇಲ್ಲಿಗೆ ಭೇಟಿ ನೀಡಿರುವ ಹಲವರ ಬಳಿ ಎರಡು ಸಾವಿರ ರೂಪಾಯಿ ನೋಟಿನ ಕಂತೆಗಳಿದ್ದರೂ ಉಪಯೋಗಕ್ಕೆ ಬಾರ ಹಣ’ ಎಂದು ಎನ್‌ಆರ್‌ಐ ಉದ್ಯಮಿ ಚಂದ್ರಶೇಖರ್‌ ಭಾಟಿಯ ಹೇಳಿದರು.

kiniudupi@rediffmail.com

No Comments

Leave A Comment