Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಾಸರಗೋಡು : ಮನೆಯೊಂದರ ಮೇಲೆ ಪೊಲೀಸರಿಂದ ದಾಳಿ : ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ಪತ್ತೆ

ಕಾಸರಗೋಡು: ಅಬಕಾರಿ ಇಲಾಖೆಯ ವಿಶೇಷ ತಂಡ ಮತ್ತು ಆದೂರು ಪೊಲೀಸರು ಮಂಗಳವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕಾರು ಮತ್ತು ಮನೆಯೊಂದರಿಂದ ಬೃಹತ್‌ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಮುಳಿಯಾರು ಪಂಚಾಯತ್‌ನ ಕೆಟ್ಟುಂಗಲ್‌ ಕೋಲಾಚಿಯಡ್ಕದ ಮೊಹಮ್ಮದ್‌ ಮುಸ್ತಫ (30) ಎಂಬಾತನನ್ನು ಬಂಧಿಸಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿದ ಸ್ಫೋಟಕ ವಸ್ತುಗಳಲ್ಲಿ ಸುಮಾರು 2,800 ಜಿಲೆಟಿನ್‌ ಸ್ಟಿಕ್‌, 6 ಸಾವಿರ ಡಿಟೋನೇಟರ್‌ ಮತ್ತು 300 ಏರ್‌ ಕ್ಯಾಪ್‌ ಒಳಗೊಂಡಿವೆ. ಆದೂರು ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಕಾಸರಗೋಡು ಎಕ್ಸೈಸ್‌ ಎನ್‌ಫೋರ್ಸ್‌ಮೆಂಟ್‌ ಆ್ಯಂಡ್‌ ಆ್ಯಂಟಿ ನಾರ್ಕೋಟಿಕ್ಸ್‌ ಸ್ಪೆಷಲ್‌ ಸ್ಕ್ವಾಡ್‌ನ‌ ಸರ್ಕಲ್‌ ಇನ್‌ಸ್ಪೆಕ್ಟರ್‌ ಶಂಕರ್‌ ಜಿ.ಎ. ನೇತೃತ್ವದ ತಂಡ ಮಾದಕ ವಸ್ತು ಸಾಗಾಟ ಸಂಬಂಧ ಚೆರ್ಕಳ ಕೆಟ್ಟುಂಗಲ್‌ನ ಕೋಲಾಚಿಯಡ್ಕದಲ್ಲಿ ಸೋಮವಾರ ರಾತ್ರಿ ವಾಹನ ತಪಾ ಸಣೆಯಲ್ಲಿ ತೊಡ ಗಿದ್ದಾಗ ಆ ದಾರಿಯಲ್ಲಿ ಬಂದ ಡಸ್ಟರ್‌ ಕಾರನ್ನು ತಡೆದು ನಿಲ್ಲಿಸಿ ತಪಾ ಸಣೆ ಗೊಳಪಡಿಸಿದಾಗ ಸ್ಫೋಟಕ ಪತ್ತೆಯಾಯಿತು. ಕಾರಿನಲ್ಲಿದ್ದ ಮೊಹಮ್ಮದ್‌ ಮುಸ್ತಫ ನನ್ನು ತತ್‌ಕ್ಷಣ ಕಾರು ಸಹಿತ ವಶಕ್ಕೆ ತೆಗೆದುಕೊಳ್ಳಲಾಯಿತು. ಅನಂತರ ಆದೂರು ಪೊಲೀಸರ ನೆರವಿನೊಂದಿಗೆ ಆರೋಪಿಯ ಮನೆಗೆ ತೆರಳಿ ಪರಿಶೀಲಿಸಿ ಅಲ್ಲಿಂದಲೂ ಬೃಹತ್‌ ಪ್ರಮಾಣದ ಸ್ಫೋಟಕ ವಶಪಡಿಸಿಕೊಳ್ಳಲಾಯಿತು.

ಕಾರ್ಯಾಚರಣೆಯಲ್ಲಿ ಅಬಕಾರಿ ಸ್ಪೆಷಲ್‌ ಸ್ಕ್ವಾಡ್‌ನ‌ ಇನ್‌ಸ್ಪೆಕ್ಟರ್‌ ರಾಧಾಕೃಷ್ಣನ್‌ ಪಿ.ಜೆ, ಪ್ರಿವೆಂಟಿವ್‌ ಆಫೀಸರ್‌ಗಳಾದ ಸುರೇಶ್‌ ಬಾಬು ಕೆ, ಉಣ್ಣಿಕೃಷ್ಣನ್‌ ಕೆ, ಸಿವಿಲ್‌ ಎಕ್ಸೈಸ್‌ ಅಧಿಕಾರಿಗಳಾದ ಅಜೇಶ್‌ ಕೆ., ಹಮೀದ್‌ ಎಂ., ಅಬಕಾರಿ ವಾಹನ ಚಾಲಕ ದಿಜಿತ್‌ ಪಿ.ವಿ. ಮತ್ತು ಕ್ರಿಸ್ಟಿನ್‌ ಎ.ಎ. ಮೊದಲಾದವರಿದ್ದರು.

No Comments

Leave A Comment