Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಸ್ಕರ್ಟ್‌ ಬದಲಿಗೆ, ಕರ್ನಾಟಕದ ವಿದ್ಯಾರ್ಥಿಗಳಿಗೆ ಸಮವಸ್ತ್ರವಾಗಿ ಚೂಡಿದಾರ್ ಅಥವಾ ಪ್ಯಾಂಟ್ಸ್ ಗೆ KSCPCR ಶಿಫಾರಸು!

ಬೆಂಗಳೂರು: ಬಾಲಕಿಯರ ಶಾಲಾ ಸಮವಸ್ತ್ರವನ್ನು ಸ್ಕರ್ಟ್‌ನಿಂದ ಚೂಡಿದಾರ್ ಅಥವಾ ಪ್ಯಾಂಟ್‌ಗೆ ಬದಲಾಯಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ರಾಜ್ಯ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ.

ಕಲಬುರಗಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸ್ಕರ್ಟ್ ಧರಿಸುವ ಹುಡುಗಿಯರು ಎದುರಿಸುತ್ತಿರುವ ಅನಾನುಕೂಲತೆಗಳ ಕುರಿತು ಆಯೋಗಕ್ಕೆ ಪತ್ರ ಬರೆದ ನಂತರ ಶಿಫಾರಸು ಮಾಡಲಾಗಿದೆ.

ಮೇ 15ರಂದು ಬರೆದ ಪತ್ರದಲ್ಲಿ ಹುಡುಗಿಯರು ನಾಚಿಕೆ ಸ್ವಭಾವದರಾಗಿದ್ದು ಪ್ರಯಾಣಿಸುವಾಗ, ಜನನಿಬಿಡ ಪ್ರದೇಶಗಳಲ್ಲಿ ತಿರುಗಾಡುವಾಗ, ಸೈಕ್ಲಿಂಗ್ ಅಥವಾ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಾಗ ಸ್ಕರ್ಟ್ ಧರಿಸುವುದು ಒಂದು ಅಡಚಣೆಯಾಗಿದೆ. ಇನ್ನು ಪತ್ರದಲ್ಲಿ ಲೈಂಗಿಕ ಕಿರುಕುಳದ ವರದಿಗಳಿವೆ ಎಂದು ಸೇರಿಸಲಾಗಿದೆ. ಹುಡುಗಿಯರು ಸಾಮಾನ್ಯವಾಗಿ ಸ್ಕರ್ಟ್‌ಗಳನ್ನು ಧರಿಸುವುದರಿಂದ ಮುಜುಗರ ವ್ಯಕ್ತಪಡಿಸುತ್ತಾರೆ ಎಂದು ಉಲ್ಲೇಖಿಸಿ, ಅವರ ಸಮವಸ್ತ್ರವನ್ನು ಚೂಡಿದಾರ್ ಅಥವಾ ಪ್ಯಾಂಟ್‌ಗೆ ಬದಲಾಯಿಸುವಂತೆ ಸೂಚಿಸಿದೆ.

ಮೇ 17ರಂದು ಕೆಎಸ್‌ಪಿಸಿಆರ್‌ಸಿ ಅಧ್ಯಕ್ಷರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಪತ್ರ ಬರೆದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯ ಈ ಶಿಫಾರಸನ್ನು ಎತ್ತಿ ತೋರಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯವೂ ವ್ಯಕ್ತವಾಗಿದ್ದು, ಇಲಾಖೆ ನಿಯಮಾನುಸಾರ ಸಮವಸ್ತ್ರ ವಿನ್ಯಾಸ ಬದಲಾವಣೆಗೆ ಅವಕಾಶವಿದ್ದಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಹಾಗೂ ಅವರ ಸುರಕ್ಷತೆಗೆ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದು ನಾವು ಮಾಡಿರುವ ಶಿಫಾರಸ್ಸು, ಇದನ್ನು ಶಿಕ್ಷಣ ಇಲಾಖೆಯೇ ನಿರ್ಧರಿಸಬೇಕು. ಅಧಿಕಾರಿಗಳಿಂದ ಶಿಫಾರಸ್ಸುಗಳು ಬಂದಿರುವುದು ಮಾತ್ರವಲ್ಲ, ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳೊಂದಿಗೆ ಸಂವಾದ ನಡೆಸಿದ್ದೇವೆ. ಆಟವಾಡುವಾಗ ಸ್ಕರ್ಟ್ ಧರಿಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಶಾಲೆಗೆ ಸೈಕಲ್ ನಲ್ಲಿ ಹೋಗುವಾಗ ಸಮವಸ್ತ್ರ-ಚೂರಿದಾರ್ ಅಥವಾ ಪ್ಯಾಂಟ್-ಬದಲಾವಣೆಯು ಅವರ ಮನಸ್ಸಿನಿಂದ ಈ ಚಿಂತೆಯನ್ನು ದೂರ ಮಾಡುತ್ತದೆ ಎಂದು ಕೆಎಸ್‌ಪಿಸಿಆರ್‌ಸಿ ಅಧ್ಯಕ್ಷ ಕೆ ನಾಗಣ್ಣ ಗೌಡ ಹೇಳಿದರು.

No Comments

Leave A Comment