ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮತ್ತೊಮ್ಮೆ ಆಡಳಿತಕ್ಕೆ ಮೇಜರ್ ಸರ್ಜರಿ: 34 ಡಿವೈಎಸ್ಪಿಗಳು, 25 ಮೀಸಲು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ ಹೊರಡಿಸಲಾಗಿದೆ.

ವರ್ಗಾವಣೆಗೊಂಡ ಡಿವೈಎಸ್‌ಪಿಗಳಲ್ಲಿ 13 ಮಂದಿ ಬೆಂಗಳೂರಿನವರು, ಮೂವರು ಮೈಸೂರಿನವರು, ಇಬ್ಬರು ಕಲಬುರಗಿಯವರು ಮತ್ತು ಗದಗ, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ಧಾರವಾಡ, ಕೊಪ್ಪಳ, ಮಂಗಳೂರು, ಚಿತ್ರದುರ್ಗ, ರಾಮನಗರ, ಕೋಲಾರ, ಹಾಸನ, ಚಾಮರಾಜನಗರ, ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಯ ತಲಾ ಒಬ್ಬರು ಡಿವೈಎಸ್‌ಪಿಗಳು ಸೇರಿದ್ದಾರೆ.

ಆರ್‌ಎಸ್‌ಐಗಳಲ್ಲಿ ಒಂಬತ್ತು ಮಂದಿ ಬೆಂಗಳೂರಿನವರು ಮತ್ತು ಮೈಸೂರು, ಬೆಳಗಾವಿ ಮತ್ತು ಕಲಬುರಗಿಯಿಂದ ತಲಾ ಇಬ್ಬರು, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಮಗಳೂರು, ಮಂಗಳೂರು, ದಕ್ಷಿಣ ಕನ್ನಡ, ಬೀದರ್ ಮತ್ತು ಯಾದಗಿರಿಯಿಂದ ತಲಾ ಒಬ್ಬರನ್ನು ವರ್ಗಾವಣೆ ಮಾಡಲಾಗಿದೆ.

ರಾಜ್ಯ ಗುಪ್ತಚರ ಇಲಾಖೆಯಲ್ಲಿ ಆರ್‌ಎಸ್‌ಐ ಆಗಿದ್ದ ವೀರಭದ್ರಯ್ಯ ಅವರನ್ನು ಸಿಎಆರ್‌ನ ಬೆಂಗಳೂರು ನಗರಕ್ಕೆ (ಕೇಂದ್ರ) ವರ್ಗಾಯಿಸಲಾಗಿದೆ.

kiniudupi@rediffmail.com

No Comments

Leave A Comment