ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ದೆಹಲಿಯಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ, ಕೆಜಿಗೆ 140 ರೂ.!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಳೆಯಿಂದಾಗಿ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಸ್ಥಗಿತಗೊಂಡ ಕಾರಣ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ  ಟೊಮೆಟೊ ರಿಟೇಲ್ ಬೆಲೆ ಕೆಜಿಗೆ 140 ರೂ.ಗೆ ಏರಿಕೆಯಾಗಿದೆ.

ಏಷ್ಯಾದ ಅತಿದೊಡ್ಡ ಸಗಟು ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಸೋಮವಾರ ಟೊಮೆಟೊ ವೋಲ್ ಸೇಲ್ ಬೆಲೆ ಗುಣಮಟ್ಟವನ್ನು ಅವಲಂಬಿಸಿ ಕೆಜಿಗೆ 60-120 ರೂ.ವರೆಗೆ ಮಾರಾಟವಾಗಿದೆ.

ಪ್ರಮುಖ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಕಡಿಮೆಯಾದ ಕಾರಣ ಟೊಮೆಟೊ ಬೆಲೆಯಲ್ಲಿ ಏರಿಕೆಯಾಗಿದೆ. ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಆಜಾದ್‌ಪುರ ಟೊಮೆಟೊ ಸಂಘದ ಅಧ್ಯಕ್ಷ ಅಶೋಕ್ ಕೌಶಿಕ್ ಪಿಟಿಐಗೆ ತಿಳಿಸಿದ್ದಾರೆ.

kiniudupi@rediffmail.com

No Comments

Leave A Comment