ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಇಂಫಾಲ್‌ನಲ್ಲಿ ಗುಂಡಿನ ದಾಳಿ, ವಾಹನಗಳಿಗೆ ಬೆಂಕಿ

ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಐತಿಹಾಸಿಕ ಕಂಗ್ಲಾ ಕೋಟೆ ಬಳಿಯ ಮಹಾಬಲಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಒಂದು ನಿರ್ದಿಷ್ಟ ಸಮುದಾಯಕ್ಕೆ ಗೃಹೋಪಯೋಗಿ ವಸ್ತುಗಳನ್ನು ಸಾಗಿಸಲು ನಾಲ್ಕು ಚಕ್ರಗಳ ವಾಹನಗಳನ್ನು ಬಳಸಲಾಗುತ್ತಿದೆ ಎಂದು ಶಂಕಿಸಿ ಜನರ ಗುಂಪೊಂದು ಎರಡು ಖಾಸಗಿ ವಾಹನಗಳನ್ನು ಸುಟ್ಟು ಹಾಕಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಶುಕ್ರವಾರ ತಡರಾತ್ರಿ ಇಂಫಾಲ್ ಪಶ್ಚಿಮ ಜಿಲ್ಲೆಯ ಯಂಗಂಗ್‌ಪೋಕ್ಪಿ ಬಳಿಯ ಲೈಕೋಟ್‌ನಲ್ಲಿ ಎರಡು ಸಮುದಾಯಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಬಿಷ್ಣುಪುರ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಣಿಪುರ ಪೊಲೀಸ್ ಕಮಾಂಡೋ ಸೇರಿದಂತೆ ನಾಲ್ವರು ಗುಂಡಿಕ್ಕಿ ಹತ್ಯೆ ಮಾಡಿದ ನಂತರ ಈ ಘಟನೆಗಳು ಸಂಭವಿಸಿವೆ.

kiniudupi@rediffmail.com

No Comments

Leave A Comment