
ಯಮುನಾ ನದಿ ನೀರಿನ ಮಟ್ಟ ಏರಿಕೆ; ಪ್ರವಾಹ ಭೀತಿ, ದೆಹಲಿಯಲ್ಲಿ ಕಟ್ಟೆಚ್ಚರ
ನವದೆಹಲಿ: ಉತ್ತರ ಭಾರತದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಭೀತಿ ಹಿನ್ನಲೆಯಲ್ಲಿ ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಯಮುನಾ ನದಿ ನೀರಿನ ಮಟ್ಟ 206.24 ಮೀಟರ್ಗೆ ಏರಿಕೆಯಾಗಿದ್ದು, ಯಮುನಾ ನದಿ ನೀರಿನ ಗರಿಷ್ಠ ಮಟ್ಟ 207.49 ಮೀಟರ್ ಆಗಿದೆ. ಅಪಾಯಕಾರಿ ಮಟ್ಟ ತಲುಪಿದೆ. ಹೀಗಾಗಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹಳೆ ರೈಲ್ವೆ ಸೇತುವೆ ಮೇಲೆ ರೈಲು ಸಂಚಾರ ಮತ್ತು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ತಿಳಿಸಿದೆ.
ಕೇಂದ್ರ ಜಲ ಆಯೋಗದ ಪ್ರವಾಹ ಮೇಲ್ವಿಚಾರಣಾ ಪೋರ್ಟಲ್ ಪ್ರಕಾರ, ಹರ್ಯಾಣವು ಯಮುನಾನಗರದ ಹತ್ನಿಕುಂಡ್ ಬ್ಯಾರೇಜ್ನಿಂದ ನದಿಗೆ ಹೆಚ್ಚಿನ ನೀರನ್ನು ಬಿಡುಗಡೆ ಮಾಡುವುದರೊಂದಿಗೆ ಹಳೆಯ ರೈಲ್ವೆ ಸೇತುವೆಯಲ್ಲಿ ನೀರಿನ ಮಟ್ಟ ಏರಿದೆ. ಮಂಗಳವಾರ ಮಧ್ಯಾಹ್ನದ ವೇಳೆಗೆ ನದಿಯು 206.65 ಮೀಟರ್ಗೆ ಏರುವ ನಿರೀಕ್ಷೆಯಿದೆ, ನಂತರ ಕ್ರಮೇಣ ಕಡಿಮೆಯಾಗುತ್ತದೆ. ಅಪಾಯಕಾರಿ ಮಟ್ಟ 205.33 ಮೀಟರ್ ಆಗಿದ್ದು ಹರಿಯಾಣದ ಯಮುನಾ ನಗರ್ ಜಿಲ್ಲೆಯಲ್ಲಿರುವ ಹಥಿನಿಕುಂಡ್ ಬ್ಯಾರೇಜ್ನಿಂದ ಮಂಗಳವಾರ (ಇಂದು) ಬೆಳಗ್ಗೆ 8ರ ಹೊತ್ತಿಗೆ 3.21 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ ಎಂದು ಹೇಳಲಾಗಿದೆ.