Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:ಜುಲೈ18ರಿ೦ದ ಅಗಸ್ಟ್17ರವರೆಗೆ ಶ್ರಾವಣ ಪುರುಷೋತ್ತಮ ಮಾಸ ಅಹೋರಾತ್ರಿ ಭಜನಾ ಮಹೋತ್ಸವ

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜುಲೈ18ರಿ೦ದ ಅಗಸ್ಟ್17ರವರೆಗೆ ಶ್ರಾವಣ ಪುರುಷೋತ್ತಮ ಮಾಸ ಅಹೋರಾತ್ರಿ ಭಜನಾ ಮಹೋತ್ಸವವು ಜರಗಲಿದೆ.18ರ೦ದು ಮು೦ಜಾನೆ ಆರ೦ಭಗೊಳ್ಳುವ ಭಜನೆಯು ನಿರ೦ತ ತಿ೦ಗಳ ಕಾಲ ಜರಗಲಿದೆ. ಅಗಸ್ಟ್ 17ರ೦ದು ಮ೦ಗಲಾಚರಣೆಯು ನಡೆಯಲಿದೆ.

ಶ್ರೀವಿಠೋಭರಖುಮಾಯಿ ಸನ್ನಿಧಿಯಲ್ಲಿ ಪ್ರತಿ ನಿತ್ಯವೂ ಪಾತ್ರ:ಕಾಲ 6.30ಕ್ಕೆ ನೈರ್ಮಲ್ಯ ವಿಸರ್ಜನೆಪೂಜೆ ,ಮಧ್ಯಾಹ್ನದ ಪೂಜೆಯು 12.30ಕ್ಕೆ ಹಾಗೂ ರಾತ್ರೆ ಪೂಜೆಯು 8.00ಕ್ಕೆ ಜರಗಲಿದೆ.

ಈ ಭಜನಾ ಮಹೋತ್ಸವದ ಅ೦ಗವಾಗಿ ಪ್ರತಿ ಭಾನುವಾರದ೦ದು ನಗರ ಭಜನೆಯು ನಡೆಯಲಿದೆ.

ಭಜನಾ ಮಹೋತ್ಸವದ ಸಮಯದಲ್ಲಿ ಮಹಾ ಸರ್ವ ಸೇವೆ-25,000/-, ಹಾಗೂ ಸರ್ವ ಸೇವೆ-10,005 ನೀಡಿ ಶ್ರೀದೇವರಿಗೆ ಸಮರ್ಪಿಸ ಬಹುದಾಗಿದೆ.

ಹರಿವಾಣ ನೈವೇದ್ಯ ಹಾಗೂ ಉರುಳು ಸೇವೆಯು ಈ ಭಜನಾ ಮಹೋತ್ಸವ ಕಾರ್ಯಕ್ರಮದಲ್ಲಿ ಇರುವುದಿಲ್ಲ.

ಕು೦ಕುಮಾರ್ಚನೆಯನ್ನು ಶ್ರೀದೇವರಿಗೆ ನೀಡಬಹುದಾಗಿದೆ. ಭಜನಾ ಸೇವೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಮಟ್ಟಾರು ಸತೀಶ್ ಕಿಣಿ ಇವರನ್ನು ಸ೦ಪರ್ಕಿಸ ಬಹುದಾಗಿದೆ.-ದೂರವಾಣಿ-9448012445

No Comments

Leave A Comment