ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:ಜುಲೈ18ರಿ೦ದ ಅಗಸ್ಟ್17ರವರೆಗೆ ಶ್ರಾವಣ ಪುರುಷೋತ್ತಮ ಮಾಸ ಅಹೋರಾತ್ರಿ ಭಜನಾ ಮಹೋತ್ಸವ ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜುಲೈ18ರಿ೦ದ ಅಗಸ್ಟ್17ರವರೆಗೆ ಶ್ರಾವಣ ಪುರುಷೋತ್ತಮ ಮಾಸ ಅಹೋರಾತ್ರಿ ಭಜನಾ ಮಹೋತ್ಸವವು ಜರಗಲಿದೆ.18ರ೦ದು ಮು೦ಜಾನೆ ಆರ೦ಭಗೊಳ್ಳುವ ಭಜನೆಯು ನಿರ೦ತ ತಿ೦ಗಳ ಕಾಲ ಜರಗಲಿದೆ. ಅಗಸ್ಟ್ 17ರ೦ದು ಮ೦ಗಲಾಚರಣೆಯು ನಡೆಯಲಿದೆ. ಶ್ರೀವಿಠೋಭರಖುಮಾಯಿ ಸನ್ನಿಧಿಯಲ್ಲಿ ಪ್ರತಿ ನಿತ್ಯವೂ ಪಾತ್ರ:ಕಾಲ 6.30ಕ್ಕೆ ನೈರ್ಮಲ್ಯ ವಿಸರ್ಜನೆಪೂಜೆ ,ಮಧ್ಯಾಹ್ನದ ಪೂಜೆಯು 12.30ಕ್ಕೆ ಹಾಗೂ ರಾತ್ರೆ ಪೂಜೆಯು 8.00ಕ್ಕೆ ಜರಗಲಿದೆ. ಈ ಭಜನಾ ಮಹೋತ್ಸವದ ಅ೦ಗವಾಗಿ ಪ್ರತಿ ಭಾನುವಾರದ೦ದು ನಗರ ಭಜನೆಯು ನಡೆಯಲಿದೆ. ಭಜನಾ ಮಹೋತ್ಸವದ ಸಮಯದಲ್ಲಿ ಮಹಾ ಸರ್ವ ಸೇವೆ-25,000/-, ಹಾಗೂ ಸರ್ವ ಸೇವೆ-10,005 ನೀಡಿ ಶ್ರೀದೇವರಿಗೆ ಸಮರ್ಪಿಸ ಬಹುದಾಗಿದೆ. ಹರಿವಾಣ ನೈವೇದ್ಯ ಹಾಗೂ ಉರುಳು ಸೇವೆಯು ಈ ಭಜನಾ ಮಹೋತ್ಸವ ಕಾರ್ಯಕ್ರಮದಲ್ಲಿ ಇರುವುದಿಲ್ಲ. ಕು೦ಕುಮಾರ್ಚನೆಯನ್ನು ಶ್ರೀದೇವರಿಗೆ ನೀಡಬಹುದಾಗಿದೆ. ಭಜನಾ ಸೇವೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಮಟ್ಟಾರು ಸತೀಶ್ ಕಿಣಿ ಇವರನ್ನು ಸ೦ಪರ್ಕಿಸ ಬಹುದಾಗಿದೆ.-ದೂರವಾಣಿ-9448012445 Share this:TweetWhatsAppEmailPrintTelegram