Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪ್ರಜಾಪ್ರಭುತ್ವ-ಸಂವಿಧಾನ ಹಕ್ಕುಗಳ ರಕ್ಷಣೆಗೆ, ತನಿಖಾ ಸಂಸ್ಥೆಗಳ ಸ್ವಾತಂತ್ರ್ಯಕ್ಕೆ ನಾವೆಲ್ಲರೂ ಒಗ್ಗೂಡುತ್ತಿದ್ದೇವೆ: ವಿಪಕ್ಷ ನಾಯಕರ ಸಭೆಯ ಮುನ್ನ ಕಾಂಗ್ರೆಸ್ ನಾಯಕರ ಹೇಳಿಕೆ

ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಮುನ್ನುಡಿಯಾಗಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿರುಸಿನ ರಾಜಕೀಯ ಚಟುವಟಿಕೆಯ ತಾಣವಾಗುತ್ತಿದೆ. ದೇಶದ ಘಟಾನುಘಟಿ ರಾಜಕೀಯ ನಾಯಕರು ರಾಜಧಾನಿಗೆ ಆಗಮಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟವನ್ನು ಕಟ್ಟಿಹಾಕುವುದು ಈ ನಾಯಕರ ಸಭೆಯ ಉದ್ದೇಶವಾಗಿದೆ.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸಿ ಲೋಕಸಭೆ ಚುನಾವಣೆಯನ್ನು ಗೆಲ್ಲಲು ತಂತ್ರ ರೂಪಿಸಲು ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ಜಾರಿಗೆ ತರುವುದು, ಸಹಮತಕ್ಕೆ ಬಂದು ಲೋಕಸಭೆ ಸ್ಥಾನಗಳಿಗೆ ಸ್ಪರ್ಧಿಸಲು ಸೀಟು ಹಂಚಿಕೆ, ವಿಪಕ್ಷಗಳಲ್ಲಿ ನಾಯಕನ ಆಯ್ಕೆ ಇತ್ಯಾದಿಗಳಿಗೆ ಸಹಮತಕ್ಕೆ ಬರಲು ಇನ್ನೂ ಹಲವಾರು ಸುತ್ತಿನ ಮಾತುಕತೆಗಳು ನಡೆಯಲಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಇಂದು ವಿರೋಧ ಪಕ್ಷದ ನಾಯಕರಿಗೆ ಆಯೋಜಿಸಿರುವ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ) ಜಯಂತ್ ಚೌಧರಿ ಅವರು ಕರ್ನಾಟಕದಲ್ಲಿ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಘೋಷಿಸಿದ್ದಾರೆ. ಆದರೂ, ಆರ್‌ಎಲ್‌ಡಿ ಶೀಘ್ರದಲ್ಲೇ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸೇರುವ ಬಗ್ಗೆ ಊಹಾಪೋಹಗಳಿವೆ.

ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಸಭೆ ಆರಂಭಕ್ಕೆ ಮುನ್ನ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ನಾವೆಲ್ಲರೂ ಒಂದೇ ಉದ್ದೇಶದಿಂದ ಒಂದಾಗಿದ್ದೇವೆ – ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಲು, ಸಾಂವಿಧಾನಿಕ ಹಕ್ಕುಗಳು ಮತ್ತು ನಮ್ಮ ಸಂಸ್ಥೆಗಳ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ವಿಪಕ್ಷಗಳ ಸಭೆಯ ಉದ್ದೇಶವಾಗಿದೆ. ಇವೆಲ್ಲವೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಈಗಿನ ಆಡಳಿತದ ದಾಳಿಗೆ ಒಳಗಾಗಿವೆ. ಅವರು ವಿರೋಧ ಪಕ್ಷದ ಧ್ವನಿಯನ್ನು ಅಡಗಿಸಲು ಬಯಸಿದ್ದರು.

ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಅದಕ್ಕೆ ದೊಡ್ಡ ಉದಾಹರಣೆಯಾಗಿದೆ. ಮಹಾರಾಷ್ಟ್ರದಲ್ಲಿ ನಡೆದ ಘಟನೆಯೂ ಒಂದು ಉದಾಹರಣೆ ಎಂದು ಹೇಳಿದರು.

No Comments

Leave A Comment