ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮಂಗಳೂರು: ಎರಡು ಅಂಗಡಿಗಳ ಮೇಲೆ ದಾಳಿ, ಮಾದಕ ದ್ರವ್ಯ ಮಿಶ್ರಿತ 100 ಕೆ.ಜಿ ಚಾಕೊಲೇಟ್ ವಶ

ಮಂಗಳೂರು: ನಗರದ ಎರಡು ಅಂಗಡಿಗಳಲ್ಲಿ ಮಾದಕ ದ್ರವ್ಯ ಮಿಶ್ರಿತ 100 ಕಿಲೋಗ್ರಾಂ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ನಡೆಸಿದ ದಾಳಿಯಲ್ಲಿ ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡ್ರಗ್ಸ್ ಲೇಪಿತ ಚಾಕೊಲೇಟ್‌ಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳನ್ನು ‘ಬ್ಯಾಂಗ್’ ಚಾಕೊಲೇಟ್‌ಗಳ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತಿತ್ತು.

ಈ ಸಂಬಂಧ ಇಬ್ಬರನ್ನೂ ಬಂಧಿಸಲಾಗಿದ್ದು, ವಶಪಡಿಸಿಕೊಂಡ ಚಾಕೊಲೇಟ್‌ಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

kiniudupi@rediffmail.com

No Comments

Leave A Comment