Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬಾಲಕಿ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳ ಮನೆ ಧ್ವಂಸ ಮಾಡಿದ ಮಧ್ಯ ಪ್ರದೇಶ ಸರ್ಕಾರ

ಸತ್ನಾ: 12 ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳ ಮನೆಯನ್ನು ಮಧ್ಯ ಪ್ರದೇಶ ಸರ್ಕಾರ ಧ್ವಂಸ ಮಾಡಿದೆ ಎಂದು ಹೇಳಲಾಗಿದೆ.

ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ದೇವಸ್ಥಾನ ಪಟ್ಟಣವಾದ ಮೈಹಾರ್‌ನಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕ್ರೂರವಾಗಿ ವರ್ತಿಸಿದ ಆರೋಪ ಹೊತ್ತಿರುವ ಇಬ್ಬರ ಮನೆಗಳನ್ನು ಸ್ಥಳೀಯ ಆಡಳಿತ ಶನಿವಾರ ನೆಲಸಮಗೊಳಿಸಿದೆ. ಆರೋಪಿಗಳಾದ ರವೀಂದ್ರ ಕುಮಾರ್ ಮತ್ತು ಅತುಲ್ ಭಡೋಲಿಯಾ ಗುರುವಾರ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಬಾಲಕಿಯ ಮೈತುಂಬಾ ಕಚ್ಚಿ ಗಾಯಗೊಳಿಸಿದ್ದಾರೆ. ಬಾಲಕಿಯ ಖಾಸಗಿ ಭಾಗಗಳಲ್ಲಿ ಗಟ್ಟಿಯಾದ ವಸ್ತುವನ್ನು ಸೇರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಆಕೆಯ ವೈದ್ಯಕೀಯ ಪರೀಕ್ಷೆಯ ವರದಿ ಬಂದ ನಂತರವೇ ಇದನ್ನು ಖಚಿತಪಡಿಸಬಹುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ನಂತರ, ಮೈಹಾರ್ ಮುನ್ಸಿಪಲ್ ಕೌನ್ಸಿಲ್‌ನ ಮುಖ್ಯ ಮುನ್ಸಿಪಲ್ ಅಧಿಕಾರಿ ಶುಕ್ರವಾರ ಇಬ್ಬರ ಕುಟುಂಬಗಳಿಗೆ ಅವರ ಜಮೀನು ಮತ್ತು ಕಟ್ಟಡಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೋರಿ ನೋಟಿಸ್ ಜಾರಿ ಮಾಡಿದ್ದರು ಎಂದು ಪೊಲೀಸ್ ಉಪವಿಭಾಗಾಧಿಕಾರಿ (ಎಸ್‌ಡಿಒಪಿ) ಲೋಕೇಶ್ ದಬರ್ ತಿಳಿಸಿದ್ದಾರೆ. ಆರೋಪಿಗಳಿಬ್ಬರ ಮನೆಗಳ ನಿರ್ಮಾಣದಲ್ಲಿ ಅಕ್ರಮವೆಸಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದ್ದು, ಭಡೋಲಿಯಾ ಅವರ ಮನೆಯನ್ನು ‘ನಜೂಲ್’ ಜಮೀನಿನಲ್ಲಿ (ಕೃಷಿಯೇತರ ಉದ್ದೇಶಕ್ಕೆ ಬಳಸುವ ಸರ್ಕಾರಿ ಭೂಮಿ) ನಿರ್ಮಿಸಲಾಗಿದ್ದು, ಕುಮಾರ್ ಅವರ ಮನೆಯನ್ನು ಅನುಮತಿಯಿಲ್ಲದೆ ನಿರ್ಮಿಸಲಾಗಿದೆ. ನಿಯಮಾನುಸಾರ ಇಂದು ಬೆಳಿಗ್ಗೆ ಎರಡೂ ಮನೆಗಳನ್ನು ಕೆಡವಲಾಯಿತು ಎಂದು ದಬರ್ ಹೇಳಿದರು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಅಧಿಕಾರಿಗಳ ತಂಡ ಭಡೋಲಿಯಾ ಅವರ ಮನೆಗೆ ತಲುಪಿದಾಗ, ಅವರ ಕುಟುಂಬ ಸದಸ್ಯರು ತನಿಖೆ ಪೂರ್ಣಗೊಂಡ ನಂತರವೇ ಯಾವುದೇ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳನ್ನು ವಿನಂತಿಸಿದರು. ಆದರೆ ಮಾತುಕೇಳದೇ ಏಕಾಏಕಿ ಅವರು ಕೆಡವಲು ಮುಂದಾದರು.

ಮೈಹಾರ್ ಪಟ್ಟಣದ ಪ್ರಸಿದ್ಧ ದೇವಾಲಯವನ್ನು ನಿರ್ವಹಿಸುವ ಟ್ರಸ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರು ಬಾಲಕಿಗೆ ಆಮಿಷವೊಡ್ಡಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಮಾಡಿ ಮತ್ತು ಕ್ರೂರವಾಗಿ ನಡೆಸಿದ್ದರು. ಆಕೆಯ ದೇಹದ ಮೇಲೆ ಕಚ್ಚಿದ ಗುರುತುಗಳನ್ನು ಹೊಂದಿರುವ ಅತಿಯಾದ ರಕ್ತಸ್ರಾವದ ಹುಡುಗಿಯನ್ನು ಸುಧಾರಿತ ವೈದ್ಯಕೀಯ ಆರೈಕೆಗಾಗಿ ವಿಭಾಗೀಯ ಪ್ರಧಾನ ಕಛೇರಿ ರೇವಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ತಂಡ ಆಕೆಯ ಆರೋಗ್ಯದ ಮೇಲೆ ನಿಗಾ ಇಡುತ್ತಿದ್ದು, ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸೆಗಾಗಿ ಭೋಪಾಲ್ ಅಥವಾ ದೆಹಲಿಗೆ ಸ್ಥಳಾಂತರಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ
30 ವರ್ಷ ವಯಸ್ಸಿನ ಆರೋಪಿಗಳನ್ನು ಶುಕ್ರವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಗುಪ್ತಾ ತಿಳಿಸಿದ್ದು, ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ, ಮಾ ಶಾರದಾ ದೇವಿ ಮಂದಿರ ನಿರ್ವಹಣಾ ಸಮಿತಿ, ಮೈಹಾರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ನಂತರ, ಅವರೊಂದಿಗೆ ಕೆಲಸ ಮಾಡುತ್ತಿದ್ದ ಕುಮಾರ್ ಮತ್ತು ಭಡೋಲಿಯಾ ಅವರನ್ನು ತಕ್ಷಣವೇ ವಜಾಗೊಳಿಸಲಾಗಿದೆ. ಅವರ ಅಸಭ್ಯ ಕೃತ್ಯವು ದೇವಾಲಯದ ಪ್ರತಿಷ್ಠೆಗೆ ಕಳಂಕ ತಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

No Comments

Leave A Comment