ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕೋಲಾರದಿಂದ ರಾಜಸ್ಥಾನಕ್ಕೆ ಹೊರಟ್ಟಿದ್ದ ಟೊಮೆಟೊ ತುಂಬಿದ ಲಾರಿ ನಾಪತ್ತೆ! ದೂರು ದಾಖಲು

ಕೋಲಾರ: ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಕೆಜಿ ಟೊಮೆಟೋ 140 ರೂ.ಗೆ ಏರಿಕೆಯಾಗಿದೆ. ಇದರಿಂದಾಗಿ ಅಲಲ್ಲಿ ಟೊಮೆಟೊ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಟೊಮೆಟೊ ಮಾತ್ರವಲ್ಲದೇ ಅದನ್ನು ಸಾಗಿಸುವ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ.

ಇತ್ತೀಚಿಗೆ ಕೋಲಾರದಿಂದ ಚಿತ್ರದುರ್ಗಕ್ಕೆ ಟೊಮೆಟೊ ಸಾಗಿಸುತ್ತಿದ್ದ ವಾಹನ ಕಳ್ಳತನವಾಗಿತ್ತು. ಇದೀಗ ಅದೇ ರೀತಿಯಲ್ಲಿ ಸುಮಾರು 21 ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ. ಜುಲೈ 27 ರಂದು  ಕೋಲಾರದಿಂದ ರಾಜಸ್ಥಾನದ ರಾಜಧಾನಿ ಜೈಪುರಕ್ಕೆ ಹೊರಟ್ಟಿದ್ದ ಲಾರಿ ನಾಪತ್ತೆಯಾಗಿದೆ.

ಲಾರಿ ಚಾಲಕ ಮೊಬೈಲ್ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಮಂಡಿ ವ್ಯಾಪಾರಿಗಳು ಕೋಲಾರ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಮೆಹತ್ ಟ್ರಾನ್ಸ್ ಪೋರ್ಟ್ ಗೆ ಸೇರಿದ ಮುನಿರೆಡ್ಡಿ ಎಂಬವರಿಗೆ ಸೇರಿದ ಲಾರಿ ನಾಪತ್ತೆಯಾಗಿದೆ. ಇದರಿಂದ ಆತಂಕಗೊಂಡಿರುವ ವ್ಯಾಪಾರಿಗಳು ದೂರು ನೀಡಿದ್ದಾರೆ.

kiniudupi@rediffmail.com

No Comments

Leave A Comment