ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ತೋಷಖಾನಾ ಭ್ರಷ್ಟಾಚಾರ ಪ್ರಕರಣ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 3 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ಮಹತ್ವದ ಬೆಳವಣಿಗೆಯೊಂದರಲ್ಲಿ ಶನಿವಾರ ಪಾಕಿಸ್ತಾನ್ ತೆಹ್ರಿಕ್ ಎ ಇನ್ಸಾಫ್(PTI) ಮುಖ್ಯಸ್ಥ ಇಮ್ರಾನ್ ಖಾನ್ ಗೆ ಮೂರು ವರ್ಷಗಳ ಜೈಲು ಶಿಕ್ಷೆಯಾಗಿದೆ.

ಪಾಕಿಸ್ತಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ದೋಷಿ ಎಂದು ತೀರ್ಪುನೀಡಿ ಮೂರು ವರ್ಷಗಳ ಜೈಲುಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಿದರೆ ಹೆಚ್ಚುವರಿ ಆರು ತಿಂಗಳು ಜೈಲಿನಲ್ಲಿ ಇರಬೇಕಾಗುತ್ತದೆ ಎಂದು ಸಹ ಎಚ್ಚರಿಕೆ ನೀಡಲಾಗಿದೆ.

ಇಸ್ಲಾಮಾಬಾದ್ ಪೊಲೀಸರು ಇಮ್ರಾನ್ ಖಾನ್ ಅವರನ್ನು ಬಂಧಿಸಲು ಬಂಧನ ವಾರಂಟ್ ಹೊರಡಿಸಿದ್ದಾರೆ. ಈ ತೀರ್ಪಿನಿಂದಾಗಿ ಐದು ವರ್ಷಗಳ ಅವಧಿಗೆ ರಾಜಕೀಯದಿಂದ ಅನರ್ಹಗೊಳಿಸಲಾಗುತ್ತದೆ. ಖಾನ್ ವಿಚಾರಣೆಗೆ ಹಾಜರಾಗಿರಲಿಲ್ಲ, ಹೀಗಾಗಿ ನ್ಯಾಯಾಧೀಶರು ಅವರನ್ನು ಬಂಧಿಸಲು ಆದೇಶಿಸಿದರು. ಆದರೆ, ತಕ್ಷಣವೇ ಮೇಲ್ಮನವಿ ಸಲ್ಲಿಸುವುದಾಗಿ ಅವರ ಕಾನೂನು ತಂಡ ಹೇಳಿದೆ.

ಅಕ್ಟೋಬರ್ 21, 2022 ರಂದು ಪಾಕಿಸ್ತಾನದ ಚುನಾವಣಾ ಆಯೋಗವು (ECP) ಇಮ್ರಾನ್ ಖಾನ್ ಅವರನ್ನು “ಸುಳ್ಳು ಹೇಳಿಕೆಗಳು ಮತ್ತು ತಪ್ಪು ಘೋಷಣೆಗಾಗಿ” ಅನರ್ಹಗೊಳಿಸಿದ ನಂತರ ತೋಶಾಖಾನಾ ವಿಷಯವು ರಾಷ್ಟ್ರೀಯ ರಾಜಕೀಯದಲ್ಲಿ ಮುನ್ನಲೆಗೆ ಬಂತು.

ತೋಷಖಾನಾವು ಕ್ಯಾಬಿನೆಟ್ ವಿಭಾಗದ ಅಡಿಯಲ್ಲಿ ಒಂದು ಇಲಾಖೆಯಾಗಿದ್ದು, ಇದು ಆಡಳಿತಗಾರರು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಇತರ ಸರ್ಕಾರಗಳ ಮುಖ್ಯಸ್ಥರು ಮತ್ತು ವಿದೇಶಿ ಗಣ್ಯರು ನೀಡಿದ ಉಡುಗೊರೆಗಳನ್ನು ಸಂಗ್ರಹಿಸುತ್ತದೆ. ಖಾನ್ ಅವರು ಬೆಲೆಬಾಳುವ ವಾಚ್ ಸೇರಿದಂತೆ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಅವುಗಳನ್ನು ಲಾಭಕ್ಕಾಗಿ ಮಾರಾಟ ಮಾಡಿದ್ದರು ಎಂಬುದು ಆರೋಪವಾಗಿದೆ.

ಇಮ್ರಾನ್ ಖಾನ್ ತೋಷಖಾನಾದಿಂದ ಉಳಿಸಿಕೊಂಡ ಉಡುಗೊರೆಗಳ ವಿವರಗಳನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂದು ಇಸಿಪಿ ಸಲ್ಲಿಸಿದ ಕ್ರಿಮಿನಲ್ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

kiniudupi@rediffmail.com

No Comments

Leave A Comment