ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಏಕರೂಪ ನಾಗರಿಕ ಸಂಹಿತೆ ಅನಿವಾರ್ಯ: ಅದಮಾರುಶ್ರೀ

ಉಡುಪಿ: ದೇಶ ಉಳಿದಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಭಾರತ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನಿವಾರ್ಯ ಎಂದು ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರತಿಪಾದಿಸಿದ್ದಾರೆ.

ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ಆಶ್ರಯದಲ್ಲಿ ಈ ತಿಂಗಳ 10ರಂದು ವಿಶ್ವಾರ್ಪಣಂ ವಿಚಾರ ಮಂಥನ ಕಾರ್ಯಕ್ರಮದಲ್ಲಿ ಪ್ರಜ್ಞಾ ಪ್ರವಾಹ ರಾಷ್ಟ್ರೀಯ ಸಂಯೋಜಕ ಜೆ. ನಂದಕುಮಾರ್ ಭಾರತಕ್ಕೆ ಏಕರೂಪ ನಾಗರಿಕ ಸಂಹಿತೆ ಏಕೆ ಬೇಕು? ವಿಚಾರದಲ್ಲಿ ಮಾತನಾಡಲಿದ್ದು, ಆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶ್ರೀಗಳು ಸಂದೇಶ ನೀಡಿದ್ದಾರೆ.

ಕಾರ್ಯಕ್ರಮ ಅಂದು ಅಪರಾಹ್ನ 3.30ರಿಂದ ಆರಂಭವಾಗಲಿದೆ.

ಭಾರತದ ಸಂವಿಧಾನದಲ್ಲಿಯೂ ಏಕರೂಪ ಶಾಸನ ಬಗ್ಗೆ ಉಲ್ಲೇಖಿಸಲಾಗಿದೆ. ಸ್ವಾತಂತ್ರ್ಯಾನಂತರದಲ್ಲಿ ಜಾರಿಯಾಗಬೇಕಾಗಿದ್ದ ಈ ಸಂಹಿತೆ ವಿವಿಧ ಕಾರಣಗಳಿಂದ ಅನುಷ್ಠಾನವಾಗಿಲ್ಲ. ವಿವಾಹ, ವಿಚ್ಚೇದನ, ದತ್ತು, ವಾರೀಸುದಾರರ ಹಕ್ಕು ಇತ್ಯಾದಿಗಳ ಬಗ್ಗೆ ಈ ಸಂಹಿತೆಯಲ್ಲಿ ತಿಳಿಸಲಾಗಿದೆ. ದೇಶದ ಜನತೆಯ ಶೇ. 86ರಷ್ಟು ಮಂದಿ ಸಂಹಿತೆ ಜಾರಿಗೆ ಉತ್ಸುಕರಾಗಿದ್ದಾರೆ.

ದೇಶ ಎಂದಮೇಲೆ ಒಂದೇ ಮನಃಸ್ಥಿತಿಯ ಮಂದಿ ಇರಬೇಕು. ಈ ಹಿನ್ನೆಲೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ಆ ಮೂಲಕ ದೇಶದ ಪ್ರಗತಿಗೆ ಸಹಕಾರಿಯಾಗಬೇಕು ಎಂದು ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

kiniudupi@rediffmail.com

No Comments

Leave A Comment