ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕಾಪು ಮಹಾದೇವಿಶಾಲೆಯಲ್ಲಿ ಆರೋಗ್ಯಭಾರತಿ ಶಾಲಾ ಕಾರ್ಯಕ್ರಮ- ಔಷಧೀಯ ಸಸ್ಯ ವಿತರಣೆ

ಉಡುಪಿ:ಕಾಪು ಶ್ರೀ ಮಹಾದೇವಿ ಪ್ರೌಢಶಾಲೆಯಲ್ಲಿ ನಡೆದ ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಶಾಲಾ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ಭಾರತಿಯ ಕಾಪು ತಾಲೂಕು ಘಟಕ ಮತ್ತು ಕಾಪು ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಬಾಲೋಪಚಾರ ಕೈಪಿಡಿ ವಿತರಿಸುವುದರೊ೦ದಿಗೆ ಔಷಧೀಯ ಸಸ್ಯಗಳನ್ನು ನೆಡಿಸಲಾಯಿತು.

ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಕಾರ್ಯದರ್ಶಿಗಳಾದ ಪ್ರಭಾಕರ ಭಟ್ ಅವರು ಆರೋಗ್ಯ ಭಾರತಿಯ ಕಾರ್ಯಸಾಧನೆಗಳನ್ನು ವಿವರಿಸಿದರು.

ಕಾಪು ತಾಲೂಕು ಘಟಕದ ಅಧ್ಯಕ್ಷರಾದ ಡಾ.ಸದಾನಂದ ಭಟ್ಟರು ಔಷಧೀಯ ಸಸ್ಯಗಳ ಮಾಹಿತಿ ನೀಡಿದರು . ಕಾಪು ರೋಟರಿ ಅಧ್ಯಕ್ಷರಾದ Rtn ರಾಜೇಂದ್ರನಾಥ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ Rtn ಶ್ರೀನಿವಾಸ್ ರಾವ್ Rtn ಬಾಲಕೃಷ್ಣ ಆಚಾರ್ಯ Rtn ಮಾಧವ ಸಾಲಿಯಾನ್ Rtn Dr ಸದಾನಂದ ಭಟ್ Rtn ಸದಾಶಿವ ಭಟ್ Rtn ವಿದ್ಯಾಧರ್ ಪುರಾಣಿಕ್
ಕಾರ್ಯದರ್ಶಿ Rtn ವೇಣು ಕೃಷ್ಣ Dr ನಿರಂಜನ ಶೆಟ್ಟಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜ್ಯೋತಿಯವರು ಸ್ವಾಗತಿಸಿದರು. ಶಿಕ್ಷಕರಾದ Rtn ಗೋಪಾಲ ನಾಯ್ಕ್ ಅವರು ಕಾರ್ಯಕ್ರಮ ನಿರೂಪಿಸಿದರು . ಸುಮಾರು ೧೦೦ ವಿದ್ಯಾರ್ಥಿಗಳು , ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು .

kiniudupi@rediffmail.com

No Comments

Leave A Comment