![](https://i0.wp.com/karavalikirana.com/kan/wp-content/uploads/2023/09/Untitled-3-4.jpg?fit=523%2C320&ssl=1)
ಜಿ20 ಆಹ್ವಾನ ಪತ್ರಿಕೆಯಲ್ಲಿ ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’: ರಾಜ್ಯಗಳ ಒಕ್ಕೂಟ ಮೇಲೆ ಆಕ್ರಮಣ ಎಂದ ಕಾಂಗ್ರೆಸ್
ನವದೆಹಲಿ: ರಾಷ್ಟ್ರಪತಿಗಳ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಕರೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಟ್ವಿಟರ್ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಂವಿಧಾನ ಒಂದನೇ ವಿಧಿಯಡಿ, ಭಾರತ, ಅದು ಇಂಡಿಯಾ, ರಾಜ್ಯಗಳ ಒಕ್ಕೂಟ ಎಂದು ಕರೆಯಲಾಗುತ್ತಿತ್ತು. ಆದರೆ ಈಗ ಈ ರಾಜ್ಯಗಳ ಒಕ್ಕೂಟ ಆಕ್ರಮಣಕ್ಕೆ ಒಳಗಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಜಿ20 ಆಮಂತ್ರಣ ಪತ್ರಿಕೆಯಲ್ಲಿ ಸೆಪ್ಟೆಂಬರ್ 9 ರಂದು ಜಿ20 ಪ್ರತಿನಿಧಿಗಳಿಗೆ ಭೋಜನ ಕೂಟವನ್ನು ಭಾರತ್ ನ ರಾಷ್ಟ್ರಪತಿಗಳು ಆಯೋಜಿಸುತ್ತಾರೆ ಎಂದು ಫೋಟೋಗಳು ತೋರಿಸುತ್ತವೆ.