ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಉಗ್ರರ ಗುಂಡೇಟಿಗೆ ಕುಕಿ-ಝೋ ಬುಡಕಟ್ಟಿನ ಮೂವರು ಬಲಿ!

ಮಣಿಪುರ: ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ನಿಷೇಧಿತ ಉಗ್ರ ಸಂಘಟನೆಯ ಉಗ್ರರು ಈ ಹತ್ಯೆ ಮಾಡಿದ್ದು, ಮಣಿಪುರದ ಕಂಗ್ಪೋಪ್ಕಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ದುಷ್ಕರ್ಮಿಗಳು ವಾಹನದಲ್ಲಿ ಬಂದು ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕಿ ಜಿಲ್ಲೆಗಳ ಗಡಿ ಭಾಗದಲ್ಲಿರುವ ಇರೆಂಗ್ ಮತ್ತು ಕರಮ್ ಪ್ರದೇಶಗಳ ನಡುವಿನ ಗ್ರಾಮಸ್ಥರ ಮೇಲೆ ದಾಳಿ ನಡೆಸಿದ್ದಾರೆ.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮೈತೆ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟಿಸಲು ಬೆಟ್ಟದ ಪ್ರದೇಶಗಳಲ್ಲಿರುವ ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಮೇ.03 ರಿಂದ ಆರಂಭವಾದ ಮಣಿಪುರದ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೂ 160 ಮಂದಿ ಸಾವನ್ನಪ್ಪಿದ್ದಾರೆ.

ಮಣಿಪುರದಲ್ಲಿ ಮೈತೆ ಸಮುದಾಯದವರು ಶೇ.’53 ರಷ್ಟಿದ್ದು, ಇಂಫಾಲ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ನಾಗ, ಕುಕಿ ಸಮುದಾಯಗಳು ಶೇ.40 ರಷ್ಟಿದ್ದು ಬೆಟ್ಟದ ಪ್ರದೇಶಗಳಲ್ಲಿರುವ ಜಿಲ್ಲೆಗಳಲ್ಲಿದ್ದಾರೆ.

kiniudupi@rediffmail.com

No Comments

Leave A Comment