Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕೇರಳದ ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್‌ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ!

ಬೆಂಗಳೂರು: ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್‌ನಿಂದ ಕೋಯಿಕ್ಕೋಡ್‌ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ.

ಸೆಪ್ಟೆಂಬರ್ 13 ರಂದು ಕೇರಳದ ಗಡಿಗಳಲ್ಲಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ರಾಜ್ಯವು ವಿಡಿಯೋ ಕಾನ್ಫರೆನ್ಸ್ ನಡೆಸಲಿದೆ. ಇವುಗಳಲ್ಲಿ ಕೊಡಗು, ಚಾಮರಾಜನಗರ, ಮೈಸೂರು ಮತ್ತು ದಕ್ಷಿಣ ಕನ್ನಡ ಸೇರಿವೆ.

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ. ರಂದೀಪ್ ಮಾತನಾಡಿ, ನಿಪಾ ವೈರಸ್‌ನ ಲಕ್ಷಣಗಳು ಕಂಡುಬರುವ ಯಾವುದೇ ಪ್ರಕರಣಗಳನ್ನು ಪರಿಶೀಲಿಸಲು ರಾಜ್ಯವು ಈ ಪ್ರದೇಶಗಳಲ್ಲಿನ ಸಮುದಾಯ ಆರೋಗ್ಯ ಕೇಂದ್ರಗಳು (ಸಿಎಚ್‌ಸಿ) ಮತ್ತು ಸಾರ್ವಜನಿಕ ಆರೋಗ್ಯ ಕೇಂದ್ರಗಳಿಗೆ (ಪಿಎಚ್‌ಸಿ) ಆದೇಶಿಸುತ್ತದೆ. ಕ್ರಿಯಾ ಯೋಜನೆ ರೂಪಿಸಿ ಸಲಹೆ ಸೂಚನೆಯನ್ನೂ ನೀಡಲಾಗುವುದು ಎಂದರು.

2021ರಲ್ಲಿ ಕೋಯಿಕ್ಕೋಡ್‌ನಲ್ಲಿ ಕೊನೆಯದಾಗಿ ನಿಪಾ ವೈರಸ್‌ ಕಾಣಿಸಿಕೊಂಡಿದ್ದು, ಮೈಸೂರು, ಮಂಗಳೂರು, ಚಾಮರಾಜನಗರ ಮತ್ತು ಕೊಡಗಿನಲ್ಲಿ ತೀವ್ರ ಕಟ್ಟೆಚ್ಚಕ ವಹಿಸಲಾಗಿತ್ತು. ಆ ಸಮಯದಲ್ಲಿ, ಕರ್ನಾಟಕದಲ್ಲಿ ಕೆಲವು ಶಂಕಿತ ಪ್ರಕರಣಗಳು ಪತ್ತೆಯಾಗಿದ್ದರೂ, ದೃಢಪಟ್ಟಿರಲಿಲ್ಲ.

ಕರ್ನಾಟಕ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ (ಐಡಿಎಸ್‌ಪಿ) ಮಾಜಿ ಯೋಜನಾ ನಿರ್ದೇಶಕ ಡಾ ರಮೇಶ್ ಕೆ ಕೌಲ್‌ಗುಡ್ ಮಾತನಾಡಿ, ಕೊರೊನಾವೈರಸ್, ನಿಪಾ ವೈರಸ್, ರೇಬಿಸ್ ಅಥವಾ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ) ಸೇರಿದಂತೆ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ರೋಗಗಳು ಹೆಚ್ಚುತ್ತಲೇ ಇವೆ ಎಂದರು.

ಝೂನೋಟಿಕ್, ಪರಿಸರ ಮತ್ತು ಮಾನವ-ಸಂಬಂಧಿತ ರೋಗಗಳ ಕಡೆಗೆ ಕಣ್ಗಾವಲು ಹೆಚ್ಚಿಸುವ ಅವಶ್ಯಕತೆಯಿದೆ. ಎಲ್ಲಾ ಇಲಾಖೆಗಳು (ಆರೋಗ್ಯ, ಪಶುವೈದ್ಯಕೀಯ ಮತ್ತು ಪರಿಸರ) ಝೂನೋಟಿಕ್ (ಪ್ರಾಣಿಯಿಂದ ಮನುಷ್ಯರಿಗೆ- ಮನುಷ್ಯರಿಂದ ಪ್ರಾಣಿಗಳಿಗೆ ಹರಡುವ) ಕಾಯಿಲೆಗಳ ಸಂಭವವನ್ನು ತೊಡೆದುಹಾಕಲು ಮತ್ತು ಎಲ್ಲಾ ರೋಗಗಳಿಂದ ರಕ್ಷಿಸಲ್ಪಟ್ಟ ಆವಾಸಸ್ಥಾನವನ್ನು ತೊಡೆದುಹಾಕಲು ಕಾರ್ಯತಂತ್ರಗಳನ್ನು ರೂಪಿಸಲು ಒಗ್ಗೂಡಿ ಕೆಲಸ ಮಾಡಬೇಕು ಎಂದು ಹೇಳಿದರು.

No Comments

Leave A Comment