Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಕಾವೇರಿ ನೀರು ವಿವಾದ – ಕನ್ನಡ ಸಂಘಟನೆ ಒಕ್ಕೂಟದಿಂದ ಸೆ.29ರಂದು ಕರ್ನಾಟಕ ಬಂದ್

ಬೆಂಗಳೂರು: ಸೆ 25. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಸೆ.29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ನಾಳಿನ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇಲ್ಲ. ಅವರು ನಮ್ಮ ಸಲಹೆಗಳನ್ನು ಪಡೆದಿಲ್ಲ. ಅದೊಂದು ರಾಜಕೀಯ ಪ್ರೇರಿತ ಬಂದ್ ಆಗಿದೆ ಎಂದರು.

ಇನ್ನು ಬಂದನ್ನು ಕೇವಲ ಬೆಂಗಳೂರಿಗೆ ಸೀಮಿತ ಮಾಡಲಾಗಿದ್ದು, ಬೆಳಗಾವಿ, ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ, ದಕ್ಷಿಣ ಕರ್ನಾಟಕ, ಮಂಗಳೂರು ಪ್ರದೇಶಗಳನ್ನು ಕಾವೇರಿ ಬಂದ್ ನಿಂದ ದೂರಿ ಇರಿಸಿರುವುದು ಸರಿಯಲ್ಲ. ಆ ಹಿನ್ನೆಲೆಯಲ್ಲಿ ಅಖಂಡ ಕರ್ನಾಟಕ್ಕೆ ಕರೆ ನೀಡಲಾಗಿದೆ ಎಂದಿದ್ದಾರೆ.

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಯುವುದನ್ನು ವಿರೋಧಿಸಿ ನಾಳೆ ರಾಜಭವನ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

No Comments

Leave A Comment