ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಸಮೀಪದ ನದಿ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಹೋದವರು ಹಿಂತಿರುಗದ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿ.ಕಾಂ. ಪದವೀಧರೆಯಾಗಿದ್ದ ವಿನಿತಾ ಉಡುಪಿ ಎಂಜಿಎಂ ಕಾಲೇಜ್ ಬಳಿಯ ಎಲೆಕ್ಟ್ರಿಕಲ್ ಬೈಕ್ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು. ನಾಪತ್ತೆಯಾದ ಬಳಿಕ ಆಕೆ ಉಪಯೋಗಿಸುತ್ತಿದ್ದ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಬಂಧಿಕರ, ಸ್ನೇಹಿತರ ಮನೆ, ಅಸುಪಾಸಿನಲ್ಲಿ ಹುಡುಕಾಡಿದ್ದು ಎಲ್ಲೂ ಪತ್ತೆಯಾಗಿರಲಿಲ್ಲ.
ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಲ್ಪೆಯ ಮುಳುಗು ತಜ್ಞ ಈಶ್ವರ್ ಮಲ್ಪೆ ಕೊಳೆತ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದು, ಮರಣೋತ್ತರ ಶವ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.