Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪುತ್ತಿಗೆ ಪರ್ಯಾಯಕ್ಕೆ ಆಹ್ವಾನ

ಉಡುಪಿ‌: ಉಡುಪಿ‌ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಪರ್ಯಾಯ ಸ್ವಾಗತ ಸಮಿತಿಯ ಪರವಾಗಿ ಪುತ್ತಿಗೆ ಮಠದ ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು ಆಹ್ವಾನಿಸಿದರು.

ಕೆಪಿಸಿಸಿ ಕೋ ಆರ್ಡಿನೇಟರ್ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಜಿ. ಕುಮಾರ್ ಗೌಡ ಜತೆಗಿದ್ದರು. ಆಮಂತ್ರಣ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುತ್ತಿಗೆ ಶ್ರೀಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ,ಪರ್ಯಾಯಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿ ಸ್ವಾಗತ ಸಮಿತಿಯ ನಿಯೋಗಕ್ಕೆ ಬೆಂಗಳೂರಿಗೆ ಬರುವಂತೆ ಆಮಂತ್ರಿಸಿದರು.

No Comments

Leave A Comment