Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕೇರಳ: ಕಲಮಸ್ಸೆರಿಯಲ್ಲಿ ಸರಣಿ ಸ್ಫೋಟ: ಮೃತರ ಸಂಖ್ಯೆ 3ಕ್ಕೆ ಏರಿಕೆ

ಕೊಚ್ಚಿ: ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷದ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ. ಈ ಮೂಲಕ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಪ್ರಾರ್ಥನಾ ಸಭೆಯಲ್ಲಿ ಸುಮಾರು 2,200-2,500 ಜನ ಭಾಗವಹಿಸಿದ್ದರು ಎನ್ನಲಾಗಿದ್ದು, ನಿನ್ನೆ ಮಹಿಳೆ ಸೇರಿದಂತೆ ಇಬ್ಬರು ಸ್ಪೋಟದಿಂದ ಸಾವನ್ನಪ್ಪಿದ್ದು,  ಹಲವು ಮಂದಿ ಗಾಯಗೊಂಡಿದ್ದಾರೆ.

ಈ ನಡುವೆ ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಸರಣಿ ಸ್ಫೋಟದ ಹೊಣೆ ಹೊತ್ತಿಕೊಂಡಿದ್ದು, ತ್ರಿಶೂರ್‌ನ ಕೊಡಕರ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಆದಾಗ್ಯೂ, ಮಾರ್ಟಿನ್ ಅವರ ಹೇಳಿಕೆಗಳನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

No Comments

Leave A Comment