Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ವರ್ಕ್ ಶಾಪ್ ನಲ್ಲಿ ಬೆಂಕಿ; ಹೊತ್ತಿ ಉರಿದ ಖಾಸಗಿ ಬಸ್​ಗಳು!

ಬೆಂಗಳೂರು: ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ಬೆಂಕಿ ವರ್ಕ್​​ಶಾಪ್​ ನಲ್ಲಿರೋ ಇತರೆ ವಾಹನಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಪ್ರಾಣ ಹಾನಿ ನಡೆದಿರುವ ಬಗ್ಗೆ ವರದಿಯಾಗಿಲ್ಲ.

ಖಾಸಗಿ ಬಸ್​ಗಳನ್ನು ನಿಲ್ಲಿಸಿದ್ದ ಜಾಗ ಇದಾಗಿತ್ತು. ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಒಳಗೆ 10 ಬಸ್ ಗಳನ್ನು ನಿಲ್ಲಿಸಲಾಗಿದೆ. ಇವು ಬೇರೆ ಬೇರೆ ಸಂಸ್ಥೆಗಳಿಗೆ ಸೇರಿರುವ ಬಸ್ ಗಳಾಗಿವೆ.

ಈ ಪೈಕಿ ಸದ್ಯ ಆರು ಬಸ್ ಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವರ್ಕ್​ಶಾಪ್​ ನಿಂದ ಜನರನ್ನು ದೂರ ಕಳುಹಿಸಲಾಗುತ್ತಿದೆ.

No Comments

Leave A Comment