ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕೇಜ್ರಿವಾಲ್ ಗೆ ಸಮನ್ಸ್‌ ಬೆನ್ನಲ್ಲೇ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಮನೆ ಮೇಲೆ ಇಡಿ ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಪ್ ನಾಯಕ ರಾಜ್ ಕುಮಾರ್ ಆನಂದ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ಸಚಿವರ ನಿವೇಶನ ಮತ್ತು ಇತರ ಕೆಲವು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇಡಿ ಅಧಿಕಾರಿಗಳ ಶೋಧ ತಂಡಕ್ಕೆ ಸಿಆರ್‌ಪಿಎಫ್‌ ಸಿಬ್ಬಂದಿ ಭದ್ರತೆ ಒಗಿಸಿದ್ದಾರೆ.

57 ವರ್ಷದ ಆನಂದ್ ಅವರು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಸಮಾಜ ಕಲ್ಯಾಣ ಮತ್ತು SC/ST ಕಲ್ಯಾಣ ಸಚಿವರಾಗಿದ್ದಾರೆ. ಅವರು ಪಟೇಲ್ ನಗರದ ಶಾಸಕರಾಗಿದ್ದಾರೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಲು ಇಡಿ ಸಮನ್ಸ್ ನೀಡಿದೆ. ಆದರೆ ದೆಹಲಿ ಸಿಎಂ ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ ಮತ್ತು ವಿಚಾರಣೆಗೆ ಗೈರು ಆಗುವ ಸಾಧ್ಯತೆ ಇದೆ ಎಂದು ಎಎಪಿ ಮೂಲಗಳು ತಿಳಿಸಿವೆ.

kiniudupi@rediffmail.com

No Comments

Leave A Comment