![](https://i0.wp.com/karavalikirana.com/kan/wp-content/uploads/2023/11/Untitled-2-3.jpg?fit=413%2C311&ssl=1)
‘ಕೃಷ್ಣಾನುಗ್ರಹವಿದ್ದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ’: ನಟಿ ಕಂಗನಾ ರಣಾವತ್
ದೇವಭೂಮಿ ದ್ವಾರಕಾ: ಕೃಷ್ಣಾನುಗ್ರಹವಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಶುಕ್ರವಾರ ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ.
ಇಂದು ಬೆಳಗ್ಗೆ ಶ್ರೀಕೃಷ್ಣನ ಪ್ರಸಿದ್ಧ ದ್ವಾರಕಾಧೀಶ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ, “ಶ್ರೀ ಕೃಷ್ಣ ಕಿ ಕೃಪಾ ರಹೀ ತೊ ಲಡೆಂಗೆ (ಶ್ರೀಕೃಷ್ಣ ಆಶೀರ್ವಾದ ಮಾಡಿದ ಹೋರಾಡುತ್ತೇನೆ)” ಎಂದು ಹೇಳಿದರು.
“600 ವರ್ಷಗಳ ಹೋರಾಟದ ನಂತರ ಅಯೋಧ್ಯೆಯಲ್ಲಿ ಭಗವಾನ್ ರಾಮನ ವಿಗ್ರಹ ಪ್ರತಿಷ್ಠಾಪನೆಗಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಶ್ಲಾಘಿಸಿದರು. ಬಿಜೆಪಿ ಸರ್ಕಾರದ ಪ್ರಯತ್ನದಿಂದ, 600 ವರ್ಷಗಳ ಹೋರಾಟದ ನಂತರ ಭಾರತೀಯರಾದ ನಾವು ಈ ದಿನವನ್ನು ನೋಡುತ್ತೇವೆ. ಅತ್ಯಂತ ಸಂಭ್ರಮದಿಂದ ದೇವಾಲಯವನ್ನು ಸ್ಥಾಪಿಸುತ್ತಿದ್ದೇವೆ. ಸನಾತನ ಧರ್ಮದ ಧ್ವಜವು ಪ್ರಪಂಚದಾದ್ಯಂತ ಹಾರಬೇಕು ಎಂದು ಅವರು ಹೇಳಿದರು.