Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಚಿಕ್ಕಬಳ್ಳಾಪುರ:2ಬೈಕ್ ಗಳು ಡಿಕ್ಕಿಯಾಗಿ ಲಾರಿಯಡಿ ಬಿದ್ದು ಬೈಕ್ ಸವಾರ ಸಾವು, ಲಾರಿಗೆ ಬೆಂಕಿ

ಚಿಕ್ಕಬಳ್ಳಾಪುರ: ಎರಡು ಬೈಕ್ ಗಳು ಡಿಕ್ಕಿಯಾಗಿ ಲಾರಿಯಡಿ ಸಿಲುಕಿದ ಪರಿಣಾಮ ಓರ್ವ ಸವಾರ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44 ರ ಹಾರೋಬಂಡೆ ಬಳಿ ಸೋಮವಾರ ನಡೆದಿದೆ. ಅಪಘಾತದ ಪರಿಣಾಮ ಸಿಮೆಂಟ್ ತುಂಬಿದ್ದ ಲಾರಿಗೆ ಬೆಂಕಿ ಹತ್ತಿದೆ.

ಮೃತರನ್ನು ಶಿಡ್ಲಘಟ್ಟ ತಾಲೂಕಿನ ಮಿತ್ತನಹಳ್ಳಿ ಗ್ರಾಮದ ನಾಗರಾಜು (40) ಎಂದು ಗುರುತಿಸಲಾಗಿದೆ.

ಹೆದ್ದಾರಿಯಲ್ಲಿ ಎರಡು ಬೈಕ್ ಸವಾರರು ಮಾತನಾಡಿಕೊಂಡು ಹೋಗುತ್ತಿದ್ದ ವೇಳೆ ಬೈಕ್ ಗಳು ಒಂದಕ್ಕೊಂದು ತಾಗಿ ರಸ್ತೆಗೆ ಬಿದ್ದಿವೆ.

ಒಂದು ಬೈಕ್ ಹಿಂದುಗಡೆಯಿಂದ ಬರುತ್ತಿದ್ದ ಲಾರಿ ಕೆಳಗಡೆ ಸಿಲುಕಿದೆ. ಕೂಡಲೇ ಲಾರಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೊಂದು ಬೈಕ್ ರಸ್ತೆ ಬದಿಗೆ ಬಿದ್ದಿತ್ತು. ಲಾರಿ ಕೆಳಗೆ ಬಿದ್ದ ಬೈಕ್ ಸವಾರ ನಾಗರಾಜಯ ಗಂಭೀರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸಿದೆ ನಾಗರಾಜು ಮೃತಪಟ್ಟಿದ್ದಾರೆ.

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದಾರೆ.

No Comments

Leave A Comment