Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ತೆಲಂಗಾಣ ಕಾಂಗ್ರೆಸ್ ಆರು ಗ್ಯಾರಂಟಿ ಘೋಷಣೆ- ಪ್ರತಿ ತಿಂಗಳು ಅತ್ತೆಗೆ 4,000 ರೂ. ಸೊಸೆಗೆ 2,500 ರೂ.

ಹೈದರಾಬಾದ್: ನ 11: ಇದೀಗ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೇಸ್‌ನ ಗ್ಯಾರಂಟಿಗಳು ಸಖತ್ ಸದ್ದು ಮಾಡ್ತಿವೆ. ತೆಲಂಗಾಣದಲ್ಲಿ ಅಧಿಕಾರದ ಗದ್ದುಗೆ ಏರಲು ಕರ್ನಾಟಕ ಮಾದರಿಯಲ್ಲೇ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳ ಮೊರೆ ಹೋಗಿದೆ.

ಚುನಾವಣೆಯ ಹಿನ್ನಲೆ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಪ್ರತಿ ತಿಂಗಳು ಅತ್ತೆಗೆ 4,000 ರೂ. ಸೊಸೆಗೆ 2,500 ರೂ. ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ),ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ, 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್, ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು ಹೀಗೆ ತೆಲಂಗಾಣ ಕಾಂಗ್ರೆಸ್‍ನಲ್ಲಿ ಆರು ಗ್ಯಾರಂಟಿಯನ್ನು ಘೋಷಣೆ ಮಾಡಿದೆ.

ಕಾಮಾರೆಡ್ಡಿ ಕ್ಷೇತ್ರದಲ್ಲಿ ರೇವಂತ್ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದ್ದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದ ನೂರು ದಿನದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡಲಾಗುತ್ತೆ ಎಂಬ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದರು. ಕೆಸಿಆರ್ ಕರ್ನಾಟಕಕ್ಕೆ ಬಂದು ಗ್ಯಾರಂಟಿಗಳ ಜಾರಿಯನ್ನು ನೋಡಲಿ ಎಂದು ಹೇಳಿದರು.

No Comments

Leave A Comment