ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ವಿದ್ಯುತ್ ಕಳವು: ಎಚ್.ಡಿ ಕುಮಾರಸ್ವಾಮಿಗೆ ಬೆಸ್ಕಾಂ ಶಾಕ್; 68 ಸಾವಿರ ರು. ದಂಡ ಪಾವತಿಸಲು ಸೂಚನೆ

ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ನಗರದ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಎಫ್ಐಆರ್ ದಾಖಲಿಸಿದೆ.

ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ 68,000 ರೂ. ದಂಡ ಪಾವತಿಸುವಂತೆ ಸೂಚಿಸಿದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ ದಂಡ ಪಾವತಿಸುವುದಾಗಿ ಮಾಜಿ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ವಿದ್ಯುತ್ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ವೈರಲ್ ಆಗಿರುವ ವಿಡಿಯೋ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿದೆ ಎಂದು ಇಂಧನ ಇಲಾಖೆಯ ಹೇಳಿಕೆ ತಿಳಿಸಿದೆ. ತನಗೆ ತಿಳಿಯದಂತೆ ಕಂಬದಿಂದ  ಪವರ್ ಪಡೆಯಲಾಗಿದೆ ಎಂದು ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

ಮನೆ ಅಲಂಕರಿಸುವ ಕೆಲಸವನ್ನು ಗುತ್ತಿಗೆದಾರನಿಗೆ ನೀಡಲಾಗಿತ್ತ, ಅವರು ತಮ್ಮ ಅಥವಾ ಅವರ ಕುಟುಂಬ ಸದಸ್ಯರಿಗೆ ತಿಳಿಯದೆ ಕಂಬದಿಂದ ವಿದ್ಯುತ್ ಪಡೆದಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಅವರ ಗಮನಕ್ಕೆ ತಂದ ತಕ್ಷಣ ವಿದ್ಯುತ್ ಸಂಪರ್ಕವನ್ನು ತೆಗೆದುಹಾಕಲಾಯಿತು. ಈ ಘಟನೆ ನಡೆದಾಗ ತಾವು ಬೆಂಗಳೂರಿನಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

ಈ ವಿಚಾರ ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಿಎಂ ವಾಗ್ದಾಳಿ ನಡೆಸಿದರು. ವಿದ್ಯುತ್ ಕಳ್ಳತನದ ಆರೋಪ ತಳ್ಳಿ ಹಾಕಿದ ಅವರು ಯಾವುದೇ ಕ್ರಮ ಎದುರಿಸಲು ನಾನು ಸಿದ್ಧ ಎಂದು  ಹೇಳಿದರು. ಕುಮಾರಸ್ವಾಮಿ ಅವರನ್ನು ವಿದ್ಯುತ್ ಕಳ್ಳ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಾಕಿತ್ತು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಜವಾಬ್ದಾರಿಯುತ ಸ್ಥಾನದಲ್ಲಿರುವವರು ವಿದ್ಯುತ್ ಕಳ್ಳತನಕ್ಕೆ ಮುಂದಾಗುವುದು ತಪ್ಪಲ್ಲವೇ? ಈ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ. ಬೆಸ್ಕಾಂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಈ ನಡುವೆ ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ಎಚ್‌ಎಂ ರಮೇಶ್ ಗೌಡ ಅವರು ಪಕ್ಷದ ಕಚೇರಿಯ ಕಾಂಪೌಂಡ್ ಮೇಲೆ ಪೋಸ್ಟರ್ ಅಂಟಿಸಿರುವ ಕುರಿತು ಶ್ರೀರಾಮಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳವಾರ ರಾತ್ರಿ 10 ಗಂಟೆಗೆ ಆಟೋ ರಿಕ್ಷಾದಲ್ಲಿ ಬಂದ ನಾಲ್ವರು ಜೆಡಿಎಸ್ ಮುಖಂಡರ ವಿರುದ್ಧ ಘೋಷಣೆ ಕೂಗಿ ಪೋಸ್ಟರ್ ಅಂಟಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

kiniudupi@rediffmail.com

No Comments

Leave A Comment