ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಂಗಳೂರು: ಕುಂಬಾರಪೇಟೆ ಮಕ್ಕಳ ಆಟಿಕೆ ಮಳಿಗೆಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಕೆಆರ್ ಮಾರುಕಟ್ಟೆ ಸಮೀಪದಲ್ಲಿರುವ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಿಗೆ 6ನೇ ಮಹಡಿವರೆಗೂ ಹಬ್ಬಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಾಗ ತಡವಾಗಿದ್ದರಿಂದ ಬೆಂಕಿಯು ಆರನೇ ಮಹಡಿಗೂ ಹಬ್ಬಿದೆ. ಸದ್ಯ, ನೀರು ಖಾಲಿಯಾಗಿದ್ದರಿಂದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಡಪಡುತ್ತಿದ್ದಾರೆ.

ಪ್ಲಾಸ್ಟಿಕ್ ಗೋದಾಮಿನ 3, 4ನೇ ಮಹಡಿಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಬೆಂಕಿ ಮತ್ತಷ್ಟು ಹೆಚ್ಚಾಯಿತು. ತಡವಾಗಿ ಐದು ವಾಹನಗಳಲ್ಲಿ ಬಂದ 30 ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಬೆಂಕಿ ಧಗಧಗಿಸಿದ ಪರಿಣಾಮ ಮೂರನೇ ಮಹಡಿಯಿಂದ ಆರನೇ ಮಹಡಿಗೆ ಬೆಂಕಿ ಹಬ್ಬಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಸಂಭವಿಸಿಲ್ಲ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

kiniudupi@rediffmail.com

No Comments

Leave A Comment