ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಭಾರತೀಯ ಮೂಲದ ವಿದ್ಯಾರ್ಥಿಯನ್ನು ಅಮೆರಿಕದಲ್ಲಿ ಗುಂಡಿಕ್ಕಿ ಹತ್ಯ

ವಾಷಿಂಗ್ಟನ್‌: ಕಾರಿನಲ್ಲಿದ್ದ ಭಾರತೀಯ ಮೂಲದ ಡಾಕ್ಟರೇಟ್‌ ವಿದ್ಯಾರ್ಥಿಯನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಆದಿತ್ಯ ಅದ್ಲಾಖಾ (26) ಅವರು ಸಿನ್ಸಿನಾಟಿ ವೈದ್ಯಕೀಯ ಶಾಲೆಯ ವಿಶ್ವವಿದ್ಯಾನಿಲಯದಲ್ಲಿ ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರ ವಿಭಾಗದಲ್ಲಿ ನಾಲ್ಕನೇ ವರ್ಷದ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದರು. ಅವರನ್ನು ಯುಎಸ್ ರಾಜ್ಯದ ಓಹಿಯೋದಲ್ಲಿ ಕೊಲೆ ಮಾಡಲಾಗಿದೆ.

ಈ ತಿಂಗಳ ಆರಂಭದಲ್ಲೇ ಆದಿತ್ಯನ ಹತ್ಯೆಯಾಗಿದೆ. ನವೆಂಬರ್ 9 ರಂದು ಸಿನ್ಸಿನಾಟಿ ಪೊಲೀಸ್ ಲೆಫ್ಟಿನೆಂಟ್ ಜೊನಾಥನ್ ಕನ್ನಿಂಗ್ಹ್ಯಾಮ್ ವೆಸ್ಟರ್ನ್ ಹಿಲ್ಸ್ ವಯಾಡಕ್ಟ್‌ನ ಮೇಲಿನ ಡೆಕ್‌ನಲ್ಲಿ ಗೋಡೆಗೆ ಅಪ್ಪಳಿಸಿದ ವಾಹನದೊಳಗೆ ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಅಧಿಕಾರಿಗಳು ಗುರುತಿಸಿದ್ದರು.

ಅಂದು ಬೆಳಗ್ಗೆ 6:20 ರ ಸುಮಾರಿಗೆ ಈ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಆದಿತ್ಯ ಅದ್ಲಾಖಾ ಅವರನ್ನು ಯುಸಿ ಮೆಡಿಕಲ್ ಸೆಂಟರ್‌ಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಎರಡು ದಿನಗಳ ನಂತರ ಆದಿತ್ಯ ಮೃತಪಟ್ಟಿದ್ದಾನೆ.

ಗುಂಡಿನ ದಾಳಿ ವರದಿಯಾದಾಗಿನಿಂದ ಯಾರನ್ನೂ ಬಂಧಿಸಲಾಗಿಲ್ಲ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಆದಿತ್ಯ ಅದ್ಲಾಖಾ ತನ್ನ ವೈದ್ಯಕೀಯ ಶಿಕ್ಷಣಕ್ಕಾಗಿ ಉತ್ತರ ಭಾರತದಿಂದ ಅಮೆರಿಕದ ಸಿನ್ಸಿನಾಟಿಗೆ ಹೋಗಿದ್ದರು. ಇದಕ್ಕೂ ಮೊದಲು ನವದೆಹಲಿಯ ರಾಮಜಾಸ್ ಕಾಲೇಜಿನಲ್ಲಿ 2018 ರಲ್ಲಿ ಪ್ರಾಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 2020 ರಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ಶರೀರಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು.

kiniudupi@rediffmail.com

No Comments

Leave A Comment