![](https://i0.wp.com/karavalikirana.com/kan/wp-content/uploads/2023/12/Untitled-1-11.jpg?fit=465%2C320&ssl=1)
ಭಾರತದಲ್ಲಿ ದುಷ್ಕೃತ್ಯಕ್ಕೆ ಉಗ್ರರ ಸಂಚು ಪ್ರಕರಣ; ಬೆಂಗಳೂರಿನ 6 ಕಡೆ ಎನ್ಐಎ ದಾಳಿ
ಬೆಂಗಳೂರು: ದೇಶದಲ್ಲಿ ದುಷ್ಕೃತ್ಯ ನಡೆಸಲು ಉಗ್ರರು ಸಂಚು ನಡೆಸಿರುವ ಹಿನ್ನೆಲೆ ಎನ್ಐಎ ತನ್ನ ದಾಳಿಯನ್ನು ಮುಂದುವರೆಸಿದ್ದು, ಇಂದು ಬೆಳಗಿನ ಜಾವ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಯುತ್ತಿದೆ.
ಶಂಕಿತ ತಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿಯನ್ನು ನಡೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.![](https://i0.wp.com/karavalikirana.com/kan/wp-content/uploads/2023/12/leo-23.jpg?resize=650%2C619&ssl=1)
ಈ ಹಿಂದೆ ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್ಐಆರ್ ದಾಖಲಾಗಿತ್ತು. ಆರ್ಟಿ ನಗರದ ಮನೆಯೊಂದರಲ್ಲಿ ಗ್ರೆನೇಡ್ ಹಾಗು ಪಿಸ್ತೂಲ್ ಸಿಕ್ಕಿತ್ತು. ಈ ಪ್ರಕರಣ ಎನ್ಐಎಗೆ ವರ್ಗಾವಣೆಯಾಗಿದ್ದು, ತನಿಖಾ ಸಂಸ್ಥೆ ತೀವ್ರವಾಗಿ ತನಿಖೆ ನಡೆಸುತ್ತಿದೆ.
ಬಂಧಿತ ಶಂಕಿತ ಉಗ್ರ ಈ ವಿಚಾರದಲ್ಲಿ ಹಲವು ಮಾಹಿತಿ ನೀಡಿದ್ದು, ಆತನಿಂದ ಪಡೆದ ಮಾಹಿತಿಯಂತೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.