ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಲಿಬಿಯಾದ ಕರಾವಳಿಯಲ್ಲಿ ದೋಣಿ ಮುಳುಗಡೆ- ಕನಿಷ್ಠ 61 ಮಂದಿ ಸಾವು

ಲಿಬಿಯಾ:ಡಿ 17. ಲಿಬಿಯಾದ ಕರಾವಳಿಯಲ್ಲಿ ದೋಣಿ ಮುಳುಗಿ ಕನಿಷ್ಠ 61 ಮಂದಿ ವಲಸಿಗರು ನಾಪತ್ತೆಯಾಗಿದ್ದಾರೆ ಹಾಗೂ ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ ಎಂದು ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಮಾಹಿತಿ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ ದೋಣಿ ಅಲೆಗಳ ಹೊಡೆತದಿಂದಾಗಿ ಮುಳುಗಿರಬಹುದು. ನೈಜೀರಿಯಾ, ಗ್ಯಾಂಬಿಯಾ ಹಾಗೂ ಇತರ ಆಫ್ರಿಕನ್ ದೇಶಗಳಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 86 ವಲಸಿಗರು ದೋಣಿಯಲ್ಲಿ ಪ್ರಯಾಣಿಸುತ್ತಿದ್ದು, ಈ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ವಲಸಿಗರು ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.

ಘಟನೆಯಲ್ಲಿ ದೋಣಿಯಲ್ಲಿದ್ದ 25 ಮಂದಿಯನ್ನು ರಕ್ಷಿಸಲಾಗಿದೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ. ಲಿಬಿಯಾ ಹಾಗೂ ಟುನೀಶಿಯಾ ಇಟಲಿಯ ಮೂಲಕ ಯುರೋಪ್ ತಲುಪುವ ಭರವಸೆಯಲ್ಲಿ ಅಪಾಯಕಾರಿ ಸಮುದ್ರ ಪ್ರಯಾಣವನ್ನು ಬೆಳೆಸಿದ ದೋಣಿ ಇದೀಗ ದುರಂತ ಅಂತ್ಯ ಕಂಡಿದೆ.

kiniudupi@rediffmail.com

No Comments

Leave A Comment