Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಕಾಸರಗೋಡು: ಸೊಳ್ಳೆ ನಿವಾರಕ ದ್ರಾವಣ ಸೇವಿಸಿ ಒಂದೂವರೆ ವರ್ಷದ ಮಗು ಮೃತ್ಯು

ಕಾಸರಗೋಡು: ಡಿ 19 . ಸೊಳ್ಳೆ ನಿವಾರಕ ದ್ರಾವಣ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಾಞಂಗಾಡ್ ಕಲ್ಲೂರಾವಿ ನಿವಾಸಿ ರಂಶೀದ್–ಅನ್ಶಿಫಾ ದಂಪತಿಯ ಪುತ್ರಿ ಜೆಸಾ(1.5) ಮೃತ ಮಗುವಾಗಿದೆ.

ಕಳೆದೆರಡು ದಿನಗಳ ಹಿಂದೆ ಮನೆಯಲ್ಲಿ ಆಟವಾಡುತ್ತಿದ್ದಾಗ ಆಲ್ ಔಟ್ ಸೊಳ್ಳೆ ನಿವಾರಕ ದ್ರಾವಣದ ಬಾಟಲಿ ಆಕಸ್ಮಿಕವಾಗಿ ಬಾಯಿಯಲ್ಲಿ ಇಟ್ಟುಕೊಂಡಿದ್ದು ಅದರದಲ್ಲಿದ್ದ ರಾಸಾಯನಿಕ ದ್ರಾವಣ ದೇಹ ಸೇರಿದೆ. ಪರಿಣಾಮ  ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣ ಮಗುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಗು ಮಂಗಳವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ.

No Comments

Leave A Comment