Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಾಸರಗೋಡು: ಸೊಳ್ಳೆ ನಿವಾರಕ ದ್ರಾವಣ ಸೇವಿಸಿ ಒಂದೂವರೆ ವರ್ಷದ ಮಗು ಮೃತ್ಯು

ಕಾಸರಗೋಡು: ಡಿ 19 . ಸೊಳ್ಳೆ ನಿವಾರಕ ದ್ರಾವಣ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಾಞಂಗಾಡ್ ಕಲ್ಲೂರಾವಿ ನಿವಾಸಿ ರಂಶೀದ್–ಅನ್ಶಿಫಾ ದಂಪತಿಯ ಪುತ್ರಿ ಜೆಸಾ(1.5) ಮೃತ ಮಗುವಾಗಿದೆ.

ಕಳೆದೆರಡು ದಿನಗಳ ಹಿಂದೆ ಮನೆಯಲ್ಲಿ ಆಟವಾಡುತ್ತಿದ್ದಾಗ ಆಲ್ ಔಟ್ ಸೊಳ್ಳೆ ನಿವಾರಕ ದ್ರಾವಣದ ಬಾಟಲಿ ಆಕಸ್ಮಿಕವಾಗಿ ಬಾಯಿಯಲ್ಲಿ ಇಟ್ಟುಕೊಂಡಿದ್ದು ಅದರದಲ್ಲಿದ್ದ ರಾಸಾಯನಿಕ ದ್ರಾವಣ ದೇಹ ಸೇರಿದೆ. ಪರಿಣಾಮ  ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣ ಮಗುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಗು ಮಂಗಳವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ.

No Comments

Leave A Comment