Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ದತ್ತ ಜಯಂತಿ ಶೋಭಾ ಯಾತ್ರೆ: ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಶೋಭಾ ಕರಂದ್ಲಾಜೆ, ಸಿಟಿ ರವಿ! ವಿಡಿಯೋ

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ  ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.

ಕೈಯಲ್ಲಿ ಭಗವಾ ಧ್ವಜ ಹಿಡಿದು ಸಾವಿರಾರರು  ಕಾರ್ಯಕರ್ತರು, ದತ್ತ ಮಾಲಾಧಾರಿಗಳೊಂದಿಗೆ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಸ್ತೆಯುದ್ಧಕ್ಕೂ  ಜೈ ಶ್ರೀರಾಮ್ ಹಾಗೂ ದತ್ತಾತ್ರೇಯ ಎಂಬ ಘೋಷಣೆ ಮೊಳಗಿದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಇಂದು  ಚಿಕ್ಕಮಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಮಹಿಳೆಯರಿಂದ ಅನಸೂಯ ಜಯಂತಿ ಆಚರಣೆ ಮಾಡುವುದರ ಮೂಲಕ ಸಂಕೀರ್ತನೆ ಯಾತ್ರೆ ನಡೆಯಲಿದೆ. ನಾಳೆ ನಗರದಲ್ಲಿ ಬೃಹತ್ ಶೋಭಾಯತ್ರೆ ನಡೆಯಲಿದೆ. ಈ ಶೋಭಾಯಾತ್ರೆಯಲ್ಲಿ 25,000 ಕ್ಕೂ ಅಧಿಕ ಜನ ಮಾಲಾಧಾರಿಗಳು ಭಾಗವಹಿಸುವ ಸಾಧ್ಯತೆ ಇದೆ.

No Comments

Leave A Comment