ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಖಾಸಗಿ ಮಳಿಗೆಗಳಿಗೆ ಸಡ್ಡು, ಬೆಂಗಳೂರಿನಲ್ಲಿ ಸರ್ಕಾರಿ ಪ್ರೀಮಿಯಂ ಮದ್ಯದಂಗಡಿ ಆರಂಭ

ಬೆಂಗಳೂರು: ಖಾಸಗಿ ಮಳಿಗೆಗಳಿಗೆ ಸಡ್ಡು ಹೊಡೆಯುವಂತೆ ರಾಜ್ಯ ಸರ್ಕಾರಿ ಸ್ವಾಮ್ಯದ ಪ್ರೀಮಿಯಂ ಮದ್ಯದಂಗಡಿ ಬೆಂಗಳೂರಿನಲ್ಲಿ ಆರಂಭವಾಗಿದೆ.

ಹೌದು.. ಕರ್ನಾಟಕ ಸರ್ಕಾರವು ಮೊದಲ ಬಾರಿಗೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಖಾಸಗಿ ಮಳಿಗೆಗಳಿಗೆ ಸಮಾನವಾಗಿ ಅತ್ಯಾಧುನಿಕ ಪ್ರೀಮಿಯಂ ಮದ್ಯದ ಅಂಗಡಿಯನ್ನು ತೆರೆದಿದೆ. ಇದು ಅಸ್ತಿತ್ವದಲ್ಲಿರುವ MSIL ಔಟ್ಲೆಟ್ ನ ನವೀಕರಿಸಿದ ಆವೃತ್ತಿಯಾಗಿದೆ. ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿ. (MSIL) ಇಲ್ಲಿನ ಬಸವೇಶ್ವರ ನಗರದ ತಿಮ್ಮಯ್ಯ ರಸ್ತೆಯಲ್ಲಿ ಹೊಸದಾಗಿ ಸರ್ಕಾರಿ ಪ್ರೀಮಿಯಂ ಮದ್ಯ ಮಾರಾಟ ಮಳಿಗೆಯನ್ನು ಆರಂಭಿಸಿದ್ದು, ಈ ಮಳಿಗೆಯನ್ನು ನೂತನ ವರ್ಷಾರಂಭದ ದಿನವಾದ ಸೋಮವಾರ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮನೋಜ್ ಕುಮಾರ್ ಅವರು, `ಮಧ್ಯಮ ವರ್ಗದಿಂದ ಹಿಡಿದು ಸಮಾಜದ ಪ್ರತಿಯೊಂದು ವರ್ಗದ ಗ್ರಾಹಕರನ್ನೂ ಸೆಳೆಯುವುದು ಎಂಎಸ್ಐಎಲ್ ನ ಗುರಿಯಾಗಿದೆ. ಇದರಂತೆ, ಹೊಸ ರೂಪ ಪಡೆದಿರುವ ಈ ಮಳಿಗೆಯಲ್ಲಿ ಸಾಮಾನ್ಯ ಬೆಲೆಯಿಂದ ಹಿಡಿದು ಅತ್ಯಂತ ದುಬಾರಿ ಬೆಲೆಯ ಬ್ರಾಂಡೆಡ್ ಮದ್ಯದ ಉತ್ಪನ್ನಗಳು ಸುಲಭವಾಗಿ ಸಿಗಲಿವೆ. ಚಿತ್ತಾಕರ್ಷಕ ಒಳಾಂಗಣ ವಿನ್ಯಾಸ ಮತ್ತು ಗ್ರಾಹಕರಿಗೆ ಹಿತಕರ ಅನುಭವ ಸಿಗುವಂತೆ ಮಾಡಲು ಇಲ್ಲಿ ಆದ್ಯತೆ ಕೊಡಲಾಗಿದ್ದು, ಜಾಗತಿಕ ಗುಣಮಟ್ಟದ ಮಾಲ್ ರೀತಿಯಲ್ಲಿ ಈ ಪ್ರೀಮಿಯಂ ಬೋಟಿಕ್ ಇದೆ. ಎಂಎಸ್ಐಎಲ್ ಅಧ್ಯಕ್ಷರೂ ಆದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರ ಸಲಹೆ ಮೇರೆಗೆ ಹಾಲಿ ಇರುವ ಮದ್ಯ‌ ಮಾರಾಟ ಮಳಿಗೆಗಳನ್ನು ಹೈಟೆಕ್ ರೀತಿಯಲ್ಲಿ ವಿನ್ಯಾಸ ಮಾಡಲು ಆರಂಭಿಸಿದ್ದು, ಹಂತಹಂತವಾಗಿ‌ ಎಲ್ಲವನ್ನೂ ಬದಲಿಸಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಬೆಂಗಳೂರಿನ ಡಾ ರಾಜ್‌ಕುಮಾರ್ ರಸ್ತೆ, ಆರ್‌ಪಿಸಿ ಲೇಔಟ್ ಮತ್ತು ವಿಜಯನಗರದಲ್ಲಿ ಇದೇ ರೀತಿಯ ಅಂಗಡಿಗಳನ್ನು ತೆರೆಯಲಾಗುವುದು. ಶಿವಾನಂದ ವೃತ್ತ, ವರ್ತೂರು, ಕೆಂಗೇರಿ ಉಪನಗರ, ಮಾರುತಿ ಸೇವಾ ನಗರ, ಹನುಮಂತನಗರ ಮತ್ತು ದೊಡ್ಡನೆಕ್ಕೆಲ್ಲಿ ಎಂಎಸ್‌ಐಎಲ್ ಮಳಿಗೆಗಳನ್ನು ಮೇಲ್ದರ್ಜೆಗೇರಿಸುವ ಕೆಲಸ. ಈ ಮಳಿಗೆಗಳು ಕೆಲವೇ ತಿಂಗಳುಗಳಲ್ಲಿ ಪುನರಾರಂಭಗೊಳ್ಳುವ ನಿರೀಕ್ಷೆಯಿದೆ. ಎಂಎಸ್‌ಐಎಲ್ ರಾಜ್ಯಾದ್ಯಂತ 1,029 ಮದ್ಯದ ಮಳಿಗೆಗಳನ್ನು ಹೊಂದಿದೆ. ಎಂಎಸ್‌ಐಎಲ್‌ನ ಅಧ್ಯಕ್ಷರೂ ಆಗಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಗ್ರಾಹಕರಿಗೆ ಮಾಲ್‌ಗಳಲ್ಲಿ ಸಿಗುವ ಅನುಭವವನ್ನು ಒದಗಿಸಲು 200 ಔಟ್‌ಲೆಟ್‌ಗಳನ್ನು ನವೀಕರಿಸುವ ಯೋಜನೆಯನ್ನು ಅಂತಿಮಗೊಳಿಸಲಾಗಿದೆ. ಮೇಲ್ದರ್ಜೆಗೇರಿಸಲಾಗುತ್ತಿರುವ ಮಳಿಗೆಗಳಿಗೆ ಕಾರ್ಪೊರೇಟ್ ಟಚ್ ನೀಡಲಾಗುವುದು. ಪ್ರಸಕ್ತ ವರ್ಷದಲ್ಲಿ MSIL ತನ್ನ ವಹಿವಾಟುಗಳನ್ನು ಸುಮಾರು ಶೇ.40 ರಷ್ಟು ಹೆಚ್ಚಿಸಲು 4,000 ಕೋಟಿ ರೂಪಾಯಿಗಳನ್ನು ತಲುಪುವ ಗುರಿಯನ್ನು ಹೊಂದಿದೆ ಎಂದು ಮನೋಜಕುಮಾರ್ ತಿಳಿಸಿದರು.

ಅಲ್ಲದೆ ಡಿಸೆಂಬರ್‌ನಲ್ಲಿ 3000 ಕೋಟಿ ರೂಪಾಯಿ ಮೌಲ್ಯದ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆಯು ಡಿಸೆಂಬರ್ 2023 ರಲ್ಲಿ 3,000 ಕೋಟಿ ರೂಪಾಯಿಗಳ ಮದ್ಯ ಮಾರಾಟವನ್ನು ನೋಂದಾಯಿಸಿದೆ, ಇದು ಕಳೆದ ವರ್ಷದ ಇದೇ ತಿಂಗಳಿಗಿಂತ 400 ಕೋಟಿ ರೂಪಾಯಿ ಹೆಚ್ಚು. ರಾಜ್ಯದಲ್ಲಿ ಸರಾಸರಿ ಮಾಸಿಕ ಮದ್ಯ ಮಾರಾಟ 2,500 ಕೋಟಿ ರೂ. ಆಗಿದೆ ಎಂದು ಅವರು ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಯಶಸ್ಸು ಹಿನ್ನಲೆ ಹಳ್ಳಿಗಳಲ್ಲೂ ಸರ್ಕಾರಿ ಚಿಟ್ ಫಂಡ್
ಮದ್ಯದ ಮಳಿಗೆಗಳನ್ನು ನವೀಕರಿಸುವುದರ ಜೊತೆಗೆ, MSIL ಚಿಟ್ ಫಂಡ್ ಮೂಲಕ 10,000 ಕೋಟಿ ವ್ಯವಹಾರಗಳ ಗುರಿಯನ್ನು ಸಾಧಿಸುವ ಗುರಿಯನ್ನು ಹೊಂದಿದೆ. ಸ್ಟೇಷನರಿ ವಸ್ತುಗಳನ್ನು ಮಾರಾಟ ಮಾಡಲು ಮತ್ತು 10 ಮೆಗಾ ಫಾರ್ಮಸಿ ಸ್ಟೋರ್‌ಗಳನ್ನು ಪ್ರಾರಂಭಿಸಲು ಫ್ರ್ಯಾಂಚೈಸ್ ಔಟ್ಲೆಟ್‌ಗಳನ್ನು ತೆರೆಯುವ ಯೋಜನೆಯನ್ನು ಸಹ ಹೊಂದಿದೆ ಎಂದು ಮನೋಜ್ ಕುಮಾರ್ ಹೇಳಿದರು.

kiniudupi@rediffmail.com

No Comments

Leave A Comment