ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಶ್ರೀರಾಮಮಂದಿರ ಜಿ ಎಸ್ ಬಿ ಸಮಾಜ ಮಲ್ಪೆ ;ದೇವರ ಪ್ರತಿಷ್ಠೆ ಪ್ರಯುಕ್ತ ಹವನ,ಧಾರ್ಮಿಕ ಸಭೆ, ಕರ ಸೇವಕರಿಗೆ ಸನ್ಮಾನ

ಉಡುಪಿ:ಶ್ರೀರಾಮಮಂದಿರ ಜಿ ಎಸ್ ಬಿ ಸಮಾಜ ಮಲ್ಪೆ ಅಯೋಧ್ಯಯಲ್ಲಿ ಶ್ರೀ ರಾಮಚಂದ್ರ ದೇವರ ಪ್ರತಿಷ್ಠೆ ಪ್ರಯುಕ್ತ ಶ್ರೀ ದೇವರ ಸನ್ನಿಧಿಯಲ್ಲಿ ಸೋಮವಾರ ಬೆಳ್ಳಿಗೆ ಸಾಮೂಹಿಕ ಪ್ರಾರ್ಥನೆ , ಪಂಚಾಮೃತ ಅಭಿಷೇಕ , ಕಲಶಾಭಿಷೇಕ , ರಾಮ ನಾಮ ಹವನ , ಶ್ರೀ ದೇವರಿಗೆ ವಿಶೇಷ ಅಲಂಕಾರ , ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನೆಡೆಯಿತು .

ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರೀ ರಾಮ ಮಂದಿರ ಜಿ ಎಸ್ ಬಿ ಸಮಾಜ ಮಲ್ಪೆ ಅಧ್ಯಕ್ಷರಾದ ಕೆ ಗೋಕುಲದಾಸ್ ಪೈ ಅಧ್ಯಕ್ಷತೆಯಲ್ಲಿ ನೆಡೆಯಿತು.

ಮುಖ್ಯ ಅತಿಥಿಗಳಾಗಿ ಶಾಸಕ ಯಶಪಾಲ್ ಸುವರ್ಣ, ಮಾಜಿ ಶಾಸಕರಾದ ರಘುಪತಿ ಭಟ್ , ಮಾಜಿ ಸಚಿವ ಪ್ರಮೋದ್ ಮಧ್ವರಾಜ್ , ಟಿ.ನಾರಾಯಣ ಪೈ ಮಣಿಪಾಲ ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನ ಮೊಕ್ತೇಸರ ಅನಂತಪದ್ಮನಾಭ ಕಿಣೆ , ಪ್ರೊ ಪವನ್ ಕಿರಣ್ ಕೆರೆ ,ಶ್ರೀ ಶಂಕರ ನಾರಾಯಣ ದೇವಸ್ಥಾನದ ಅಧ್ಯಕ್ಷ ಸಾಧು ಸಾಲಿಯಾನ್ , ಆನಂದ ಸುವರ್ಣ , ನಾಗರಾಜ್ ಸುವರ್ಣ , ಗೋಪಾಲ್ ಸಿ ಬಂಗೇರ ಉಪಸ್ಥಿತರಿದ್ದರು ಅಯೋದ್ಯೆಯ ಶ್ರೀ ರಾಮ ಮಂದಿರದ ಕರ ಸೇವಕರಾಗಿ ಸೇವೆಸಲ್ಲಿಸಿದ ನರೇಂದ್ರ ನಾಯಕ ಉಡುಪಿ , ಪ್ರಮೋದ್ ಭಂಡಾರ್ ಕಾರ್ ಮಲ್ಪೆ ,ಜಯಂತ್ ಸಾಲಿಯಾನ್ ಪಡುಕೆರೆ ರವರನ್ನು ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಎ೦.ವಾಮನ್ ಭಟ್ ರವರು ಸ್ವಾಗತಿಸಿ,ಕಾರ್ಯಕ್ರಮವನ್ನು ನಿರೂಪಿಸಿ,ಸುನೀಲ್ ಶೆಣೈಪ್ರಸ್ತಾವಿಕವಾಗಿ ಮಾತನಾಡಿದರು.

ಪ್ರಸಿದ್ಧ ಆಕಾಶವಾಣಿ ದೂರದರ್ಶನ ಕಲಾವಿದ ರಾಜೇಶ್ ಪಡಿಯಾರ್ ಮೈಸೂರು ,ರಂಜಿತ್ ಭಟ್ , ವಾಣಿಶ್ರೀ ಪ್ರಮೋದ್ ಇವರಿಂದ ಸುಗಮ ಸಂಗೀತ ಕಾರ್ಯಕ್ರಮ ನೆಡೆಯಿತು.ರಾತ್ರಿ 7 ಕ್ಕೆ ದೀಪಾರಾಧನೆ , ಹಾಗೂ ಭಜನಾ ಕಾರ್ಯಕ್ರಮ , ಸುಡುಮದ್ದು ಪ್ರದರ್ಶನ ಜರಗಿತು ಶ್ರೀ ರಾಮ ಮಂದಿರದ ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್ ಅಧ್ಯಕ್ಷರು , ಪದಾಧಿಕಾರಿಗಳು , ಜಿ ಎಸ್ ಬಿ ಯುವಕ , ಹಾಗೂ ಮಹಿಳಾ ಮಂಡಳಿಯ ಸದಸ್ಯರು ಉಪಸ್ಥರಿದ್ದರು ,ನೂರಾರು ಭಕ್ತರೂ ಉಪಸ್ಥಿತರಿದ್ದರು.

kiniudupi@rediffmail.com

No Comments

Leave A Comment