Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿ೦ದ ಮಾ.ಸಮರ್ಥ ಭಟ್ ಕಲಾ ಕ್ಷೇತ್ರದಲ್ಲಿ,(ಕ್ಲೇ ಆರ್ಟ್ಸ್)ಗೆ “ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ”ಪ್ರದಾನ

ಉಡುಪಿ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ 2023-24 ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡುವ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಉಡುಪಿ ಕಲ್ಯಾಣಪುರ ನಿವಾಸಿ ಸಂದೇಶ್ ಭಟ್ ಹಾಗೂ ಶ್ರೀಮತಿ ಸಂಜನಾ ಭಟ್ ಇವರ ಸುಪುತ್ರ, ಮಣಿಪಾಲ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಎರಡನೇ ತರಗತಿಯ ವಿದ್ಯಾರ್ಥಿ ಮಾ.ಸಮರ್ಥ ಭಟ್ ಆಯ್ಕೆಯಾಗಿದ್ದು, ದಿನಾಂಕ 26.01.2024 ರಂದು ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾ.ಸಮರ್ಥ ಭಟ್ ಕಲಾ ಕ್ಷೇತ್ರದಲ್ಲಿ,(ಕ್ಲೇ ಆರ್ಟ್ಸ್) ಮಾಡಿರುವ ಸಾಧನೆಯನ್ನು ಗುರುತಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಉಡುಪಿ ವಿಧಾನಸಭಾ ಸದಸ್ಯರಾದ ಯಶ್ಪಾಲ್ ಸುವರ್ಣ ಸೇರಿದಂತೆ ಇತರ ಪ್ರಮುಖರು ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರಾವಳಿಕಿರಣ ಡಾಟ್ ಕಾ೦ ಮಾ.ಸಮರ್ಥ ಭಟ್ ರವರಿಗೆ ಅಭಿನ೦ದನೆಯನ್ನು ಸಲ್ಲಿಸುತ್ತಿದೆ

No Comments

Leave A Comment