ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಳ್ತಂಗಡಿ: ಪಾದಚಾರಿಗಳ ಮೇಲೆ ಹರಿದ ಲಾರಿ – ಇಬ್ಬರು ಮೃತ್ಯು

ಬೆಳ್ತಂಗಡಿ, ಫೆ 04, ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ.

ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ.

ಮೃತಪಟ್ಟ ಪುರುಷ ವ್ಯಕ್ತಿಯನ್ನು ಉಜಿರೆ ನಿವಾಸಿ ಕಿಟ್ಟು ಎನ್ನಲಾಗಿದ್ದು, ಉಳಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ.

No Comments

Leave A Comment