ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಬೆಳ್ತಂಗಡಿ: ಪಾದಚಾರಿಗಳ ಮೇಲೆ ಹರಿದ ಲಾರಿ – ಇಬ್ಬರು ಮೃತ್ಯು
ಬೆಳ್ತಂಗಡಿ, ಫೆ 04, ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ.
ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ.
ಮೃತಪಟ್ಟ ಪುರುಷ ವ್ಯಕ್ತಿಯನ್ನು ಉಜಿರೆ ನಿವಾಸಿ ಕಿಟ್ಟು ಎನ್ನಲಾಗಿದ್ದು, ಉಳಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ.