ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಳ್ತಂಗಡಿ: ಪಾದಚಾರಿಗಳ ಮೇಲೆ ಹರಿದ ಲಾರಿ – ಇಬ್ಬರು ಮೃತ್ಯು

ಬೆಳ್ತಂಗಡಿ, ಫೆ 04, ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ.

ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ.

ಮೃತಪಟ್ಟ ಪುರುಷ ವ್ಯಕ್ತಿಯನ್ನು ಉಜಿರೆ ನಿವಾಸಿ ಕಿಟ್ಟು ಎನ್ನಲಾಗಿದ್ದು, ಉಳಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ.

No Comments

Leave A Comment