ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಸುಳ್ಯ: ಹಾಡುಹಗಲೇ ಮನೆಗೆ ನುಗ್ಗಿ ಕಳ್ಳತನ; ಶ್ವಾನದಳ,ಬೆರಳಚ್ಚು ತಜ್ಞರಿಂದ ಸ್ಥಳ ಪರಿಶೀಲನೆ

ಸುಳ್ಯ,:ಫೆ 09. ಯಾರೂ ಇಲ್ಲದ ಸಂದರ್ಭ ಬಳಸಿ, ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ಹಣ ಕಳ್ಳತನ ನಡೆಸಿದ ಘಟನೆ ಸಂಪಾಜೆಯ ಬೈಲಿನಲ್ಲಿ ಫೆ.08 ರಂದು ನಡೆದಿದೆ.

ಸಂಪಾಜೆ ಬೈಲಿನ ಕನ್ಯಾನ ವಿಜಯ ಅವರ ಮನೆಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಅವರು ಬೆಳಿಗ್ಗೆ ಕಲ್ಲುಗುಂಡಿಯ ತಮ್ಮ ಅಂಗಡಿಗೆ ಹೋಗಿ ಸಂಜೆ ವೇಳೆ ಮನೆಗೆ ಹಿಂದಿರುಗಿ ನೋಡಿದಾಗ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿತ್ತು. ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಲಾಗಿದ್ದು, ಸಂಪಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಯಲ್ಲಿದ್ದ 40 ಗ್ರಾಂ ಚಿನ್ನಾಭರಣ ಮತ್ತು 20ಸಾವಿರ ಮೌಲ್ಯದ ಹಣ , ಉಂಗುರ ಕಳ್ಳತನವಾಗಿದೆ. ಸ್ಥಳಕ್ಕೆ ಮಡಿಕೇರಿ ಪೊಲೀಸ್ ಸಿಬ್ಬಂದಿ , ಬೆರಳಚ್ಚು ತಜ್ಞರು , ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಲಾಗಿದೆ.

No Comments

Leave A Comment