ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಸುಳ್ಯ: ಹಾಡುಹಗಲೇ ಮನೆಗೆ ನುಗ್ಗಿ ಕಳ್ಳತನ; ಶ್ವಾನದಳ,ಬೆರಳಚ್ಚು ತಜ್ಞರಿಂದ ಸ್ಥಳ ಪರಿಶೀಲನೆ
ಸುಳ್ಯ,:ಫೆ 09. ಯಾರೂ ಇಲ್ಲದ ಸಂದರ್ಭ ಬಳಸಿ, ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ಹಣ ಕಳ್ಳತನ ನಡೆಸಿದ ಘಟನೆ ಸಂಪಾಜೆಯ ಬೈಲಿನಲ್ಲಿ ಫೆ.08 ರಂದು ನಡೆದಿದೆ.
ಸಂಪಾಜೆ ಬೈಲಿನ ಕನ್ಯಾನ ವಿಜಯ ಅವರ ಮನೆಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಅವರು ಬೆಳಿಗ್ಗೆ ಕಲ್ಲುಗುಂಡಿಯ ತಮ್ಮ ಅಂಗಡಿಗೆ ಹೋಗಿ ಸಂಜೆ ವೇಳೆ ಮನೆಗೆ ಹಿಂದಿರುಗಿ ನೋಡಿದಾಗ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿತ್ತು. ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಲಾಗಿದ್ದು, ಸಂಪಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮನೆಯಲ್ಲಿದ್ದ 40 ಗ್ರಾಂ ಚಿನ್ನಾಭರಣ ಮತ್ತು 20ಸಾವಿರ ಮೌಲ್ಯದ ಹಣ , ಉಂಗುರ ಕಳ್ಳತನವಾಗಿದೆ. ಸ್ಥಳಕ್ಕೆ ಮಡಿಕೇರಿ ಪೊಲೀಸ್ ಸಿಬ್ಬಂದಿ , ಬೆರಳಚ್ಚು ತಜ್ಞರು , ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಲಾಗಿದೆ.