Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಉತ್ತರ ಕನ್ನಡ ಜಿಲ್ಲಾ ಪದಾಧಿಕಾರಗಳ ನೇಮಕ – ಅನಂತ್​ಕುಮಾರ್ ಹೆಗಡೆಗೆ ಹಿನ್ನಡೆ

ಕಾರವಾರ:ಫೆ 10.ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಇಬ್ಬರು ಹಿರಿಯ ನಾಯಕ ನಡುವೆ ಪೈಪೋಟಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ಮತ್ತೊಂದೆಡೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಕೂಡ ಕಣಕ್ಕಿಳಿಯಲು ಮುಂದಾಗಿದ್ದಾರೆ. ಈ ನಡುವೆ ಉತ್ತರ ಕನ್ನಡ ಜಿಲ್ಲಾ ಪದಾಧಿಕಾರಗಳ ನೇಮಕವಾಗಿದ್ದು, ಅನಂತ್ ಕುಮಾರ್ ಹೆಗಡೆಗೆ ಹಿನ್ನಡೆಯಾಗಿದೆ.

ಜಿಲ್ಲಾ ಪದಾಧಿಕಾರಿಗಳ ನೇಮಕದಲ್ಲಿ ಮಾಜಿ ಶಾಸಕಿ ರೂಪಾಲಿ ನಾಯ್ಕ್​ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಬಣದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ.

ಇನ್ನು ಸಂಸದ ಅನಂತ್​ ಕುಮಾರ್​ ಹೆಗಡೆ ಸೂಚಿಸಿದವರ ಪೈಕಿ ಕೇವಲ ಇಬ್ಬರು ಮಾತ್ರ ಜಿಲ್ಲಾ ಬಿಜೆಪಿ ಪದಾಧಿಕಾರಿ ಆಗಿ ನೇಮಕ ಮಾಡಲಾಗಿದ್ದು, ಹೆಗಡೆ ಅವರರಿಗೆ ಹಿನ್ನಡೆಯಾಗಿದೆ.

ಪದಾಧಿಕಾರಿಗಳ ನೇಮಕ ಕಳೆದ 15 ದಿನಗಳ ಹಿಂದೆ ಕಾಗೇರಿ ಮತ್ತು ಅನಂತ್ ಕುಮಾರ್ ನಡುವೆ ಭಿನ್ನಾಭಿಪ್ರಾಯಕ್ಕೂ ಕಾರಣವಾಗಿತ್ತು.

No Comments

Leave A Comment